ರಾಷ್ಟ್ರ ದ್ರೋಹಿ ಹೇಳಿಕೆ ನೀಡಿರೋರನ್ನು ಗುಂಡಿಟ್ಟು ಕೊಲ್ಲಿ: ಮಾಜಿ ಡಿಸಿಎಂ ಈಶ್ವರಪ್ಪ

0
Spread the love

ವಿಜಯಪುರ: ರಾಷ್ಟ್ರ ದ್ರೋಹಿ ಹೇಳಿಕೆ ನೀಡ್ತಿರೋರನ್ನ ಗುಂಡಿಟ್ಟು ಕೊಲ್ಲಿ ಎಂದು ಮಾಜಿ ಡಿಸಿಎಂ ಈಶ್ವರಪ್ಪ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ, ಸಂತೋಷ ಲಾಡ್, ದಿನೇಶ್ ಗುಂಡೂರಾವ್, ಕೊತ್ತೂರು ಮಂಜುನಾಥ, ಹರಿಪ್ರಸಾದ್ ಹೇಳಿಕೆಗೆ ಈಶ್ವರಪ್ಪ ಗುಂಡಿಟ್ಟು ಕೊಲ್ಲಿ ಎಂದು ಹೇಳಿದ್ದಾರೆ.

Advertisement

ಜೂನಿಯರ್ ಕಾಂಗ್ರೆಸ್ ನಾಯಕರು ಮಾತ್ರ ಟೀಕೆ ಮಾಡುತ್ತಿದ್ದಾರೆ. ಸೀನಿಯರ್ ಖರ್ಗೆ ವಿಧಿ ಇಲ್ಲದೆ ಅಲ್ಲೊಂದು ಇಲ್ಲೊಂದು ಮಾತನಾಡುತ್ತಾರೆ. ಆದ್ರೆ ಪಾಕಿಸ್ತಾನ ಪರವಾಗಿ ಮರಿ ಖರ್ಗೆ ಇದ್ದಾರೆ.

ಹರಿಪ್ರಸಾದ್, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್ ಅವರಂತಹ ಕೆಲವರಿಗೆ ಮಾತ್ರ ಎಲ್ಲಿ ಇದ್ದೇವೆ. ಏನು ಮಾಡುತ್ತಿದ್ದೇವೆ. ಕಾಂಗ್ರೆಸ್ ನಾಯಕರು ಹೌದೋ, ಅಲ್ವೋ ಎಂದೇ ಗೊತ್ತಾಗುತ್ತಿಲ್ಲ. ಇವರ ಬಗ್ಗೆ ಕಾಂಗ್ರೆಸ್‌ನವರಿಂದಲೇ ಟೀಕೆ ಕೇಳಿಬರುತ್ತಿದೆ ಎಂದರು.


Spread the love

LEAVE A REPLY

Please enter your comment!
Please enter your name here