2025ರ ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿರುವ ಶ್ರೇಯಸ್ ಅಯ್ಯರ್ ಅವರಿಗೆ ಬೇಸರದ ಸುದ್ದಿಯೊಂದು ಹೊರಬಿದ್ದಿದೆ. ಶ್ರೇಯಸ್ ಅಯ್ಯರ್ ಅವರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗುವುದಿಲ್ಲ ಎಂಬ ವರದಿಗಳಿವೆ. ಬಿಸಿಸಿಐ ಮೂಲಗಳ ಪ್ರಕಾರ, ಶ್ರೇಯಸ್ ಅಯ್ಯರ್ ಅವರನ್ನು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆ ಮಾಡಲಾಗುವುದಿಲ್ಲ. ಅಲ್ಲದೆ ಅವರಿಗೆ ಭಾರತ-ಎ ತಂಡದಲ್ಲೂ ಸ್ಥಾನ ಸಿಗುವುದಿಲ್ಲ. ಭಾರತಕ್ಕಾಗಿ ಮೂರು ಸ್ವರೂಪಗಳನ್ನು ಆಡಿರುವ ಇಂತಹ ಮಹಾನ್ ಬ್ಯಾಟ್ಸ್ಮನ್ನನ್ನು ಟೀಮ್ ಇಂಡಿಯಾ ಮತ್ತು ಬಿಸಿಸಿಐ ಈ ಬಾರಿ ಕೈಬಿಡಲು ಮುಂದಾಗಿದೆ ಎನ್ನಲಾಗಿದೆ.
ಶ್ರೇಯಸ್ ಅಯ್ಯರ್ ಅವರನ್ನು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆ ಮಾಡಲಾಗುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದಕ್ಕೆ ಕಾರಣವನ್ನೂ ನೀಡಲಾಗಿದ್ದು, ಅವರು ಇನ್ನೂ ತಮ್ಮ ಕೆಂಪು ಚೆಂಡಿನ ಆಟದಲ್ಲಿ ಕೆಲಸ ಮಾಡಬೇಕಾಗಿದೆ. ಅಯ್ಯರ್ ಏಕದಿನ ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ ಆದರೆ ಟೆಸ್ಟ್ ಕ್ರಿಕೆಟ್ ಬೇರೆಯದೇ ಆಟ. ಇಂಗ್ಲೆಂಡ್ನಲ್ಲಿ ಶಾರ್ಟ್ ಬಾಲ್ ಅಷ್ಟು ದೊಡ್ಡ ಸಮಸ್ಯೆಯಲ್ಲ ಆದರೆ ಚೆಂಡು ಅಲ್ಲಿ ಸ್ವಿಂಗ್ ಆಗುತ್ತದೆ, ಆದ್ದರಿಂದ ಚೆಂಡನ್ನು ಬಿಡುವುದು ಬಹಳ ಮುಖ್ಯ. ಅಯ್ಯರ್ ಆಕ್ರಮಣಕಾರಿ ಆಟಗಾರ ಮತ್ತು ಅವರು ವೇಗವಾಗಿ ರನ್ ಗಳಿಸಲು ಪ್ರಯತ್ನಿಸುತ್ತಾರೆ. ಹಾಗಾಗಿ ಇಂಗ್ಲೆಂಡ್ನಲ್ಲಿ ಅವರಿಗೆ ಸಮಸ್ಯೆ ಆಗಬಹುದು ಎಂದು ಹೇಳಲಾಗಿದೆ.
ಈಗಾಗಲೇ ಇಂಗ್ಲೆಂಡ್ ಪ್ರವಾಸಕ್ಕೆ ಭಾರತ-ಎ ತಂಡ ಪ್ರಕಟವಾಗಿದೆ. ನಾಯಕತ್ವವನ್ನು ಅನುಭವಿ ಬ್ಯಾಟ್ಸ್ಮನ್ ಅಭಿಮನ್ಯು ಈಶ್ವರನ್ ಅವರಿಗೆ ವಹಿಸಲಾಗಿದ್ದು, ನಿರೀಕ್ಷೆಯಂತೆ ಕನ್ನಡಿಗ ಕರುಣ್ ನಾಯರ್ಗೆ ಈ ತಂಡದಲ್ಲಿ ಅವಕಾಶ ನೀಡಲಾಗಿದೆ. ಇವರಲ್ಲದೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ ಕೂಡ ತಂಡಕ್ಕೆ ಮರಳಿದ್ದಾರೆ.