ಬಾಗಲಕೋಟೆ: ಹೃದಯಾಘಾತದಿಂದ ಜಮಖಂಡಿ ಓಲೆಮಠದ ಶ್ರೀ ಡಾ.ಅಭಿನವ ಕುಮಾರ ಚೆನ್ನಬಸವ ಮಹಾಸ್ವಾಮಿಗಳು ನಿಧನ ಹೊಂದಿದ್ದಾರೆ. ಸ್ವಾಮೀಜಿಗಳು ಶುಗರ್, ಬಿಪಿ, ಹೃದಯ ಸಮಸ್ಯೆಯಿಂದ ಕಳೆದ ಎರಡು ವರ್ಷದಿಂದ ಬಳಲುತ್ತಿದ್ದರು. ನಿನ್ನೆ ರಾತ್ರಿ 9:30 ಕ್ಕೆ ಜೀವ ತ್ಯಜಿಸಿದ್ದಾರೆ. ಸವದತ್ತಿಯ ಗೊರವಿನಕೊಳ್ಳದ ಓಲೆಮಠದ ಶಾಖಾಮಠದಲ್ಲಿ ಕೊನೆಯುಸಿರೆಳೆದಿದ್ದಾರೆ.
Advertisement
ಗೊರವಿನಕೊಳ್ಳ ಸವದತ್ತಿಯಲ್ಲಿ ಪಾರ್ಥಿವ ಶರೀರ ಮೆರವಣಿಗೆ ನಡೆಯಲಿದೆ. ನಂತರ ಬೆ ಜಮಖಂಡಿಗೆ ಸಾಗಿಸಲಾಗುವುದು. ಓಲೆಮಠದ ಆವರಣದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸಂಜೆ 5 ಗಂಟೆಗೆ ಜಮಖಂಡಿ ನಗರದಲ್ಲಿ ಪಾರ್ಥಿವ ಶರೀರ ಮೆರವಣಿಗೆ ಇರಲಿದೆ. ಸಂಜೆ 7 ಗಂಟೆಗೆ ಮಠದ ಆವರಣದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಲಿಂಗಾಯತ ಧಾರ್ಮಿಕ ವಿಧಿವಿಧಾನದ ಪ್ರಕಾರ ಅಂತ್ಯ ಸಂಸ್ಕಾರ ನಡೆಯಲಿದೆ.