ಶ್ರೀ ಜಗದ್ಗುರು ರೇಣುಕಾಚಾರ್ಯ ರಥೋತ್ಸವ

0
rambhapuri
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ :ತಾಲೂಕಿನ ತಿರುಮಲಕೊಪ್ಪ ಗ್ರಾಮದ (ತಡಸ್ ಕ್ರಾಸ್) ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಮತ್ತು ಜನಜಾಗೃತಿ ಧರ್ಮ ಸಮ್ಮೇಳನ ಏಪ್ರಿಲ್ 9ರ ಸಂಜೆ 6.30ಕ್ಕೆ ಜರುಗುವುದು.
ಅ.ಭಾ.ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷರಾದ ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಸಮಾರಂಭವನ್ನು ಉದ್ಘಾಟಿಸುವರು. ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯರು, ಸೂಡಿ ಜುಕ್ತಿ ಹಿರೇಮಠದ ಡಾ.ಕೊಟ್ಟೂರ ಬಸವೇಶ್ವರ ಶಿವಾಚಾರ್ಯರು, ಮಳಲಿ ಸಂಸ್ಥಾನ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯರು, ಬಂಕಾಪುರದ ರೇವಣಸಿದ್ಧ ಶಿವಾಚಾರ್ಯರು, ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದ ದಾನಯ್ಯ ದೇವರು ಪಾಲ್ಗೊಂಡು ಉಪದೇಶಾಮೃತ ನೀಡುವರು.
ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವ ಸಂತೋಷ ಲಾಡ್, ಶಾಸಕ ಎಂ.ಆರ್. ಪಾಟೀಲ, ಮಾಜಿ ಸಚಿವ ಪಿ.ಸಿ. ಸಿದ್ಧನಗೌಡ್ರ, ಮಾಜಿ ಸಂಸದ ಎಂ.ಸಿ. ಕುನ್ನೂರು, ಮಾಜಿ ಶಾಸಕರಾದ ಕುಸುಮಾವತಿ ಶಿವಳ್ಳಿ, ಎಸ್.ಐ. ಚಿಕ್ಕನಗೌಡ್ರ, ಎಂ.ಎಸ್. ಅಕ್ಕಿ ಸೇರಿದಂತೆ ಹಲವಾರು ಗಣ್ಯಮಾನ್ಯರು ಆಗಮಿಸುವರು.
ಏಪ್ರಿಲ್ 8ರ ಸಂಜೆ ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ದಾನಯ್ಯ ದೇವರು ನಡೆಸಿಕೊಂಡು ಬಂದ ಲಿಂ. ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಶಿವಾಚಾರ್ಯ ಭಗವತ್ಪಾದರ ಪುರಾಣ ಪ್ರವಚನ ಮಂಗಲ ಸಮಾರಂಭ ನಡೆಯಲಿದ್ದು, ಮುಕ್ತಿಮಂದಿರದ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು, ಸುಳ್ಳದ ಶಿವಸಿದ್ಧರಾಮೇಶ್ವರ ಶಿವಾಚಾರ್ಯರು ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ವೀರಭದ್ರಯ್ಯ ಚಿಕ್ಕಮಠ, ನಿಂಗಪ್ಪ ಹೊರಓಣಿ, ಶಿದ್ಧಲಿಂಗಯ್ಯ ಪೂಜಾರ, ಗಂಗಯ್ಯ ಲೇಸಯ್ಯನವರಮಠ, ಡಾ. ನಿಂಗರಾಜ ಲಿಂಬಿಕಾಯಿ, ಶಶಿಧರ ಉಳ್ಳಾಗಡ್ಡಿಮಠ ಸೇರಿದಂತೆ ಅನೇಕ ಗಣ್ಯರು ಆಗಮಿಸುವರು. ಪ್ರಾತಃಕಾಲ ಲಿಂ.ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳ ಮಂಗಲ ಮೂರ್ತಿಗೆ ರುದ್ರಾಭಿಷೇಕ ನಡೆಯುವುದು.
ಏ. 10ರಂದು ಸಂಜೆ 4.30ಕ್ಕೆ ಪಾರ್ವತಿ ರಥೋತ್ಸವ ಹಾಗೂ ಕಡುಬಿನ ಕಾಳಗ ಜರುಗುವುದು.
ಆಗಮಿಸಿದ ಸಕಲ ಭಕ್ತಾದಿಗಳಿಗೆ ಪ್ರಸಾದ ಸೇವೆಯನ್ನು ತಿರುಮಲಕೊಪ್ಪದ ಶಂಕರಗೌಡ ಪ.ಪಾಟೀಲ, ಬುಡರಶಿಂಗಿಯ ಈಶ್ವರಯ್ಯ ಚ.ಹಿರೇಮಠ, ಕುಂದಗೋಳದ ಮುತ್ತಣ್ಣ ತಡಸೂರ, ಕುಂದಗೋಳದ ಗಂಗಾಧರಯ್ಯ ನಾವಳ್ಳಿಮಠ, ಅಗಡಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ವಹಿಸಿಕೊಂಡಿದ್ದಾರೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ಸಮಾರಂಭಕ್ಕೂ ಮುನ್ನ ಶ್ರೀ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಜರುಗುವುದು. ಪ್ರಾತಃಕಾಲ ಜಂಗಮ ವಟುಗಳಿಗೆ ಶಿವದೀಕ್ಷೆ, ಅಯ್ಯಾಚಾರ ನಡೆಯುವುದು. ಶಿವದೀಕ್ಷಾ ಅಪೇಕ್ಷಿತರು ಹೆಸರನ್ನು ಮೊಬೈಲ್ ನಂ- 9980681109, 9945693405 ಹಾಗೂ 8904459341 ಮುಂಚಿತವಾಗಿ ಸಂಪರ್ಕಿಸಿ ನೋಂದಾಯಿಸಬೇಕು.

Spread the love
Advertisement

LEAVE A REPLY

Please enter your comment!
Please enter your name here