HomeGadag Newsಶ್ರೀ ಮಹರ್ಷಿ ವಾಲ್ಮೀಕಿ ಜಗತ್ತಿಗೇ ಮಾದರಿ

ಶ್ರೀ ಮಹರ್ಷಿ ವಾಲ್ಮೀಕಿ ಜಗತ್ತಿಗೇ ಮಾದರಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ ಮಾತನಾಡಿ, ಶ್ರೀ ಮಹರ್ಷಿ ವಾಲ್ಮೀಕಿಯವರು ರಾಮಾಯಣವನ್ನು ಬರೆದು ಜಗತ್ತಿಗೆ ಮಾದರಿಯಾದರು. ಇಂತಹ ಮಹಾನ್ ವ್ಯಕ್ತಿಯ ಜಯಂತ್ಯುತ್ಸವವನ್ನು ಸರ್ವರೂ ಅತ್ಯಂತ ಹೆಮ್ಮೆಯಿಂದ ಆಚರಿಸುವಂತಾಗಲಿ ಎಂದರು.

ಬಿಜೆಪಿ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಾತನಾಡಿ, ಮಹರ್ಷಿಗಳ ಜಯಂತಿಯನ್ನು ಜಾತ್ಯಾತೀತವಾಗಿ ನೆರವೇರಿಸಬೇಕು ಎಂದರು. ಪ್ರಮುಖರಾದ ರವಿ ದಂಡಿನ, ಈಶಪ್ಪ ನಾಯ್ಕರ, ಎಂ.ಎಂ ಹಿರೇಮಠ, ಬಿಜೆಪಿ ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರಪ್ಪ ರಂಗಪ್ಪನವರ ಸಂದರ್ಭೋಚಿತವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪ್ರಶಾಂತ ನಾಯ್ಕರ, ಗ್ರಾಮೀಣ ಮಂಡಲ ಅಧ್ಯಕ್ಷ ಬೂದಪ್ಪ ಹಳ್ಳಿ, ಅಶೋಕ ಕರೂರ, ರಾಘವೇಂದ್ರ ಯಳವತ್ತಿ, ಶಶಿಧರ ದಿಂಡೂರ, ಅನಿಲ ಅಬ್ಬಿಗೇರಿ, ರಮೇಶ್ ಸಜ್ಜಗಾರ, ನಾಗರಾಜ ತಳವಾರ, ಶಂಕರ ಕಾಕಿ, ಅಶೋಕ ಕುಡತಿನಿ, ವಿಜಯಲಕ್ಷ್ಮೀ ಮಾನ್ವಿ, ಪದ್ಮಿನಿ ಮುತ್ತಲದಿನ್ನಿ, ಡಿ.ಬಿ. ಕರಿಗೌಡ್ರ, ಮಂಜುನಾಥ ಶಾಂತಗೇರಿ, ಕೆ.ಪಿ. ಕೋಟಿಗೌಡ್ರ, ಎಂ.ಎ. ಸಂಗನಾಳ ವಕೀಲರು, ಮಾಂತೇಶ ಬಾತಾಖಾನಿ, ಮಂಜುನಾಥ ಎಲಿಸುರ, ಜಗದೀಶ ತಳವಾರ, ಅಪ್ಪಣ್ಣ ಟೆಂಗಿನಕಾಯಿ, ಶರಣಪ್ಪ ತಳಕಲ, ರಾಮಣ್ಣ ರಣತೂರ, ಪಕ್ಕೀರಪ್ಪ ಮಾದಣ್ಣವರ, ವಿನೋದ ಹಂಸನೂರ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಎಸ್.ಟಿ. ಮೋರ್ಚಾ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಾಯ್.ಪಿ. ಅಡ್ನೂರ ನಿರೂಪಿಸಿದರು. ಯಲ್ಲಪ್ಪ ಶಿರಿ ವಂದಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!