ಶಿವಮೊಗ್ಗ: ಹಿಂದುತ್ವ ತುಳಿಯುವುದು ಸಿದ್ದರಾಮಯ್ಯ, ಡಿಕೆಶಿ ನೀತಿ ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಂದುತ್ವ ತುಳಿಯಬೇಡಿ, ಹಿಂದುತ್ವ ರಕ್ಷಣೆ ಮಾಡಿ.ಹಿಂದುತ್ವ ತುಳಿಯುವುದು ಕಾಂಗ್ರೆಸ್ ನೀತಿ, ಸಿದ್ದರಾಮಯ್ಯ, ಡಿಕೆಶಿ ನೀತಿ. ಇನ್ನೂ ಈ ನೀತಿ ಚಾಮುಂಡೇಶ್ವರಿ ತಾಯಿ ಒಪ್ಪಲ್ಲ ಎಂದು ಹೇಳಿದ್ದಾರೆ.
Advertisement
ಹಿಂದುತ್ವ, ಗೋವುಗಳ ಸಂರಕ್ಷಣೆ ಮಾಡಿದರೆ ಚಾಮುಂಡೇಶ್ವರಿ ತಾಯಿ ನಿಮ್ಮ ಸಿಎಂ ಸ್ಥಾನ ಉಳಿಸಿಕೊಡುತ್ತಾಳೆ.ಗೋವುಗಳ ಕಳವು ನಡೆಯುತ್ತಿದೆ.ಗೋವು ಕಳ್ಳರ ವಿರುದ್ದ ಕ್ರಮ ಇಲ್ಲ. ಗೋವು ಕಳ್ಳರ ಹಿಡಿದರೆ ಮುಸ್ಲಿಂರ ಓಟು ಸಿಗಲ್ಲ ಅಂತ ಒಲೈಕೆ ಮಾಡುತ್ತಿದ್ದಾರೆ. ಮುಸ್ಲಿಂರು ಹಿಂದುಗಳು ಅಣ್ಣ ತಮ್ಮಂದಿರ ರೀತಿ ಇದ್ದೇವೆ. ನೀವೇ ಎತ್ತಿ ಕಟ್ಟುತ್ತಿರೋದು.ದೇಶದ್ರೊಹಿ ಮುಸ್ಲಿಂಮರು ಈ ಕೃತ್ಯಗಳನ್ನು ಮಾಡತ್ತಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.