ಸಿದ್ದರಾಮಯ್ಯನವರು ಓಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿಲ್ಲ: ಸ್ಪಷ್ಟನೆ ಕೊಟ್ಟ ಸಿಎಂ ಕಚೇರಿ!

0
Spread the love

ಬೆಂಗಳೂರು:- ಸಿದ್ದರಾಮಯ್ಯನವರು ಓಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿಲ್ಲ ಎಂದು ಸಿಎಂ ಕಚೇರಿ ಸ್ಪಷ್ಟನೆ ಕೊಟ್ಟಿದೆ.

Advertisement

ಸಿಎಂ ಸಿದ್ದರಾಮಯ್ಯನವರನ್ನು ಎಐಸಿಸಿ ಓಬಿಸಿ ಸಲಹಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಹಲ್​ ಚಲ್ ಎಬ್ಬಿಸಿದೆ. ನಾಯಕತ್ವ ಬದಲಾವಣೆ ಚರ್ಚೆ ನಡುವೆ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್​ ರಾಷ್ಟ್ರ ಮಟ್ಟದ ಹುದ್ದೆ ನೀಡಿದ್ದು, ಹೀಗಾಗಿ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಕರೆದೊಯ್ಯಲಾಗುತ್ತಿದೆ ಎನ್ನುವ ಚರ್ಚೆ ಜೋರಾಗಿದೆ.

ಈ ಬೆನ್ನಲ್ಲೇ ಸಿಎಂ ಕಚೇರಿ ಸ್ಪಷ್ಟನೆ ಕೊಟ್ಟಿದ್ದು, ಅಂತಹ ಯಾವುದೇ ನೇಮಕಾತಿಗೆ ಆಗಿಲ್ಲ. ಓಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ ಎಂದು ತಿಳಿಸಿದೆ. ಸಿದ್ದರಾಮಯ್ಯನವರು ಓಬಿಸಿ ಸಲಹಾ ಮಂಡಳಿಯ ಸದಸ್ಯರು. ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ.‌

ಈ ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿಗಳು ವಹಿಸಿಕೊಂಡಿದ್ದಾರೆ. ಸಭೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ. ವಿವಿಧ ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here