ವಿಜಯಪುರ: ಸಿದ್ದರಾಮಯ್ಯ ಓರ್ವ ದಲಿತ ವಿರೋಧಿ ಮಹಾ ಮೋಸಗಾರ ಎಂದು ಮಾಜಿ ಡಿಸಿಎಂ ಸಂಸದ ಗೋವಿಂದ ಕಾರಜೋಳ ಸಿಎಂ ವಿರುದ್ಧ ಕಿಡಿಕಾರಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಓರ್ವ ದಲಿತ ವಿರೋಧಿ ಮಹಾ ಮೋಸಗಾರ. ಮತ್ತೊಂದು ಆಯೋಗ ಅವರು ರಚನೆ ಮಾಡಲು ನಿರ್ಣಯಿಸಿದ್ದು ನಾವು ಒಪ್ಪಲ್ಲ.ಇಡೀ ರಾಜ್ಯದಾದ್ಯಂತ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದಲಿತರು ಹೋರಾಟ ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನೂ ನಿನ್ನೆ ಒನ್ ಮ್ಯಾನ್ ಕಮಿಷನ್ ಮಾಡಿದ್ದಾರೆ. ಸಿದ್ದರಾಮಯ್ಯ ವಿರುದ್ದ ಮುಂಬುರುವ ದಿನಗಳಲ್ಲಿ ನಾವು ಉಗ್ರ ಹೋರಾಟ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯರನ್ನು ರಾಜ್ಯದಲ್ಲಿ ನಾವು ಓಡಾಡಲು ಬಿಡಲ್ಲ ಎಂದು ಹೇಳಿದರು. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಶಾಸಕರುಗಳು ಮನೆಗೆ ಮುತ್ತಿಗೆ ಹಾಕ್ತೇವೆ. ರಾಜ್ಯದ 30 ಜಿಲ್ಲೆಗಳಲ್ಲಿ ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಗುತ್ತೆ ಮತ್ತು ಸದಾಶಿವ ಆಯೋಗದ ವರದಿ ಜಾರಿಗೆ ನವೆಂಬರ್ 15 ರವರೆಗೆ ಗಡುವು ನೀಡುತ್ತೇವೆ ಎಂದು ಹೇಳಿದರು.