ಯಾದಗಿರಿ: ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗರರೊಂದಿಗೆ ಹಾಸನ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಬದಿಗಿಟ್ಟು ಶಕ್ತಿ ಪ್ರದರ್ಶನ ಮಾಡಲು ಹೊರಟಿದ್ದಾರೆ.
ಡಿಕೆಶಿ ಅವರು ಕೋಟೆಗೆ ನುಗ್ಗಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಬರುವ ದಿನಗಳಲ್ಲಿ ಕಾಂಗ್ರೆಸ್ನಲ್ಲಿ ಯಾವ ರೀತಿ ಬದಲಾವಣೆ ಆಗುತ್ತದೆ ನೋಡಿ, ಸಿದ್ದರಾಮಯ್ಯ ಸಿಎಂ ಅವಧಿ ಮುಗಿದಿದೆ ಅಧಿಕಾರ ಬಿಟ್ಟು ಕೊಡಿ ಎಂದು ಡಿಕೆಶಿವಕುಮಾರ್ ಅವರು ತೊಡೆ ತಟ್ಟಿಕೊಂಡು ಹೊರಟ್ಟಿದ್ದಾರೆ ಎಂದರು.
ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆಯ ಪವರ್ ಪಾಲಿಟಿಕ್ಸ್ ಅಸಮಾಧಾನ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ನಲ್ಲಿ ಬಹಳ ದೊಡ್ಡ ಮಟ್ಟದ ಅಸಮಾಧಾನ ಸ್ಫೋಟ ಆಗುತ್ತದೆ. ವಿಜಯೇಂದ್ರ ಅವರು ಹೇಳಿದ್ರೆ ಯಾರು ನಂಬುತ್ತಿಲ್ಲ, ಕಾಂಗ್ರೆಸ್ನಲ್ಲಿ ಈಗಾಗಲೇ ಕಚ್ಚಾಟ ಶುರುವಾಗಿದೆ ಎಂದರು.