ಸಿದ್ದರಾಮಯ್ಯಗೆ ಗೇಟ್‌ ಪಾಸ್‌ ನೀಡೋದು ಪಕ್ಕಾ: ಆರ್‌. ಅಶೋಕ್‌ ಭವಿಷ್ಯ!

0
Spread the love

ಬೆಂಗಳೂರು:- ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಗೇಟ್ ಪಾಸ್ ನೀಡೋದು ಪಕ್ಕಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಭವಿಷ್ಯ ನುಡಿದಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಶಾಸಕರ ವಿಶ್ವಾಸ ಕಳ್ಕೊಂಡಿದ್ದಾರೆ. ಅವ್ರನ್ನ ಅತಂತ್ರ ಮಾಡಲು ಯಾರು ಕುತಂತ್ರ ಮಾಡ್ತಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಗೇಟ್‌ ಪಾಸ್ ನೀಡೋದು ಪಕ್ಕಾ ಎಂದರು. ಶಾಸಕರೇ ಸಿಎಂ ಬದಲಾವಣೆ ಬಗ್ಗೆ ಮಾತಾಡ್ತಿದ್ದಾರೆ. ರಾಜಣ್ಣ ಕ್ರಾಂತಿ ಆಗುತ್ತೆ ಅಂದಿದ್ದಾರೆ. ಕ್ರಾಂತಿ ಆಗೋದು ಗ್ಯಾರಂಟಿ, ಸಿದ್ದರಾಮಯ್ಯ ಶಾಸಕರ ವಿಶ್ವಾಸ ಕಳ್ಕೊಂಡಿದ್ದಾರೆ. 2 ವರ್ಷದಿಂದ ಸರ್ಕಾರ ಟೇಕ್ ಆಫ್ ಆಗಿಲ್ಲ. ಕಾಗೆ ಕೂರೋದಿಕ್ಕೂ ಕೊಂಬೆ ಬೀಳೋದಕ್ಕೂ ಸರಿಯಾಗಿದೆ. ಈಗ ಸಿದ್ದರಾಮಯ್ಯ ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿದ್ದಾರೆ. ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗೋದು ಗ್ಯಾರಂಟಿ ಆಗಿದೆ.

ಸಿದ್ದರಾಮಯ್ಯ ದೆಹಲಿಗೆ ಹೋದರೆ ಇಲ್ಲಿಗೆ ಯಾರು ಬರ್ತಾರೆ? ಮಲ್ಲಿಕಾರ್ಜುನ ಖರ್ಗೆ ಬರ್ತಾರೋ? ಪರಮೇಶ್ವರ್ ಬರ್ತಾರೋ? ಡಿಕೆಶಿ ಬರ್ತಾರೊ? ಖರ್ಗೆಯವರಿಗೆ ಒಂದ್ಸಲ ಸಿಎಂ ಆಗೋ ಆಸೆ ಇದೆ. ಅವರೇ ಬರ್ತಾರಾ ನೋಡಬೇಕು. ಖರ್ಗೆ ಪ್ರತೀ ಸಲ ಸಿಎಂ ಹುದ್ದೆ ಹತ್ತಿರ ಬರ್ತಾರೆ, ಕೊನೇ ಕ್ಷಣಕ್ಕೆ ಕೊಕ್ ಆಗ್ತಾರೆ. ಈಗ ಖರ್ಗೆ ಅವರೇ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು, ಈಗ ಖರ್ಗೆ ಬಂದರೂ ಬರಬಹುದು. ಡಿಕೆಶಿ ಈಗಾಗಲೇ ಸಿಎಂ ಪೋಸ್ಟ್ ಮೇಲೆ ಟವೆಲ್ ಹಾಕಿ ಕೂತಿದ್ದಾರೆ. ಇನ್ನೂ ಎರಡೂವರೆ ವರ್ಷ ಈ ಸರ್ಕಾರದಲ್ಲಿ ಅತಂತ್ರತೆ ಗ್ಯಾರಂಟಿ ಅಂತ ಲೇವಡಿ ಮಾಡಿದ್ದಾರೆ


Spread the love

LEAVE A REPLY

Please enter your comment!
Please enter your name here