ಚಿಕ್ಕಬಳ್ಳಾಪುರ: ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡೋದಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ನಮ್ಮ ಮುಖ್ಯಮಂತ್ರಿಗಳು ಸಿದ್ದರಾಮಯ್ಯ, ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ಹೇಳಿದರು.
Advertisement
ಬಿಜೆಪಿಯವರು ಹೋರಾಟ ಮಾಡಬೇಕು. ಹಾಗಾಗಿ ಹೋರಾಟ ಮಾಡಲಿ. ಆದರೆ, ಕುಮಾರಸ್ವಾಮಿ, ಯಡಿಯೂರಪ್ಪನವರ ಮೇಲೆ ಎಫ್ಐಆರ್ ಆಗಿಲ್ವಾ? ಬೇಲ್ ಮೇಲೆ ಹೊರಗಿಲ್ವಾ? ವಿಜಯೇಂದ್ರ ಮೇಲೆ ಇಲ್ವಾ? ಅವರು ಮೊದಲು ರಾಜೀನಾಮೆ ಕೊಟ್ಟು ಮೇಲ್ಪಂಕ್ತಿ ಹಾಕಿಕೊಡಲಿ. ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ ಎಂದು ಪ್ರಶ್ನಿಸಿದರು.