ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆ ಬಹಳ ಇದೆ: ಸಿಎಂ ಪರ ಬ್ಯಾಟ್‌ ಬೀಸಿದ ಪ್ರತಾಪ್‌ ಸಿಂಹ

0
Spread the love

ಮೈಸೂರು: ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆ ಬಹಳ ಇದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸಿಎಂ ಪರ ಬ್ಯಾಟ್‌ ಬೀಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಸೈದ್ಧಾಂತಿಕವಾಗಿ ನಾವು ಅವರನ್ನು ವಿರೋಧಿಸುತ್ತೇನೆ.

Advertisement

ಆದರೆ ಈ ವಿಚಾರದಲ್ಲಿ ವಿರೋಧ ಮಾಡಲ್ಲ‌. ಸ್ಪಷ್ಟ ಬಹುಮತದ ಜೊತೆ ಎರಡು ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆ ಬಹಳ ಇದೆ ಎಂದು ಹೇಳಿದರು.

ಜಯದೇವ ಆಸ್ಪತ್ರೆ ಕಟ್ಟಡ, ಸೂಪರ್ ಸ್ಪೆಷಲಾಟಿ ಆಸ್ಪತ್ರೆ ಕಟ್ಟಿಸಿದ್ದು ಸಿದ್ದರಾಮಯ್ಯ. ರಾಜಪಥ ಮಾಡಿಸಿದ್ದು ಸಿದ್ದರಾಮಯ್ಯ. 40 ವರ್ಷ ದಿಂದ ವಿಧಾನಸಭೆಗೆ ಸಿದ್ದರಾಮಯ್ಯ ಹೋಗಿದ್ದಾರೆ. ಅವರ ಹೆಸರು ಇಡುವುದರಲ್ಲಿ ತಪ್ಪೇನಿದೆ. ಈ ವಿಚಾರದಲ್ಲಿ ತಕಾರರು ಎತ್ತಿದರೆ ಮೊಸರಿನಲ್ಲಿ ಕಲ್ಲು ಹುಡುಕಿದಂತೆ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here