ಜಾತಿಗಣತಿ ವಿಚಾರದಲ್ಲಿ ಸಿದ್ದರಾಮಯ್ಯರ ಪೌರುಷ ಎಲ್ಲೋಯ್ತು? – ರೇಣುಕಾಚಾರ್ಯ ವ್ಯಂಗ್ಯ!

0
Spread the love

ದಾವಣಗೆರೆ:- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಂಪಿ ರೇಣುಕಾಚಾರ್ಯ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇನೆ ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರ ಪೌರುಷ ಈಗ ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದರು.

Advertisement

ಸಿಎಂ ಸಿದ್ದರಾಮಯ್ಯ ಅವರು ಚುನಾವಣೆ ಸಮಯದಲ್ಲಿ ಎಲ್ಲಿಗೆ ಹೋದ್ರೂ ಜಾತಿ ಜನಗಣತಿ ಬಿಡುಗಡೆ ಮಾಡೇ ಮಾಡ್ತಿನಿ ಎಂದು ಎದೆ ತಟ್ಟಿಕೊಂಡು ಹೇಳುತ್ತಿದ್ದರು. ಆ ಪೌರುಷ ಈಗ ಎಲ್ಲಿ ಹೋಯ್ತು ಎಂದಿದ್ದಾರೆ.

ಕಾಂತರಾಜ ಆಯೋಗದ ವರದಿ ಅವೈಜ್ಞಾನಿಕ ಎಂದು ಬಿಜೆಪಿ ಮೊದಲೇ ಹೇಳಿತ್ತು. ಈಗ ಕಾಂಗ್ರೆಸ್ ಹೈಕಮಾಂಡ್ ಮಾತು ಕೇಳಿ ಸಿದ್ದರಾಮಯ್ಯ ಮರು ಜಾತಿಗಣತಿ ಎಂದು ಹೇಳುತ್ತಿದ್ದಾರೆ. ಹಾಗಾದ್ರೆ ಆಗ ಖರ್ಚು ಮಾಡಿದ್ದ 170 ಕೋಟಿ ರೂ. ಯಾರು ಕೊಡ್ತಾರೆ ಎಂದು ಪ್ರಶ್ನಿಸಿದರು. ಅಲ್ಲದೇ, ಕಾಂತರಾಜ್ ಆಯೋಗಕ್ಕೆ ಖರ್ಚು ಮಾಡಿದ್ದ 170 ಕೋಟಿ ರೂ. ಹಣವನ್ನು ಕಾಂಗ್ರೆಸ್ ಪಕ್ಷವೇ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here