ಪ್ರಾಸಿಕ್ಯೂಷನ್‌ ವಿರುದ್ಧ ಸಿದ್ದು ಕಾನೂನು ಸಮರ ! ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ

0
Spread the love

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಕಾನೂನು ಹೋರಾಟ ಆರಂಭಿಸಲಿದ್ದು, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿಲಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಮತ್ತು ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ವಿಚಾರ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ.

Advertisement

ರಾಜ್ಯಪಾಲರ ಅನುಮತಿ ರದ್ದುಪಡಿಸಬೇಕೆಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನ 163ನೇ ವಿಧಿಯಂತೆ ಸಂಪುಟದ ಶಿಫಾರಸು ಪಾಲಿಸಬೇಕು. ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡುವ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ. ಹೀಗಾಗಿ ಇಂದೇ ತುರ್ತು ವಿಚಾರಣೆ ನಡೆಸಬೇಕು ಎಂದು ಸಿಎಂ ಪರ ವಕೀಲ ರವಿವರ್ಮ ಕುಮಾರ್ ಮನವಿ ಮಾಡಿದ್ದಾರೆ.

 


Spread the love

LEAVE A REPLY

Please enter your comment!
Please enter your name here