ಸಿಂಧೂರ ಕೇವಲ ಸಂಪ್ರದಾಯವಲ್ಲ, ಅದು ಸಂಕೇತ: ನಟ ಮೋಹನ್ ಲಾಲ್

0
Spread the love

ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಕಾರವಾಗಿ ಭಾರತ ಸೇನೆ ದಾಳಿ ನಡೆಸಿದೆ. ತಡರಾತ್ರಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9 ಅಡುಗುತಾಣಗಳ ಮೇಲೆ ಏರ್‌ಸ್ಟ್ರೈಕ್ ಮಾಡಲಾಗಿದ್ದು ದಾಳಿಯಲ್ಲಿ ೧೦೦ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದೀಗ ಭಾರತೀಯ ಸೇನೆಯ ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್ ಹೊಗಳಿದ್ದಾರೆ. 

Advertisement

ನಾವು ಸಿಂಧೂರವನ್ನು ಕೇವಲ ಸಂಪ್ರದಾಯಿಕವಾಗಿ ಇಡುತ್ತಿಲ್ಲ. ಬದಲಾಗಿ ಸಂಕೇತವಾಗಿ ಇಡುತ್ತೇವೆ. ನಮಗೆ ಸವಾಲು ಹಾಕಿದ್ರೆ ನಾವು ಎಂದಿಗಿಂತಲೂ ಹೆಚ್ಚು ನಿರ್ಭೀತರಾಗಿ ಮತ್ತು ಬಲಶಾಲಿಯಾಗಿ ನಿಲ್ಲುತ್ತೇವೆ. ಭಾರತೀಯ ಸೇನೆ, ನೌಕಾಪಡೆ, ವಾಯುಪಡೆ ಮತ್ತು ಬಿಎಸ್‌ಎಫ್‌ನ ಪ್ರತಿಯೊಬ್ಬ ಧೈರ್ಯಶಾಲಿ ಹೃದಯಗಳಿಗೆ ನಮಿಸುತ್ತೇನೆ. ನಿಮ್ಮ ಧೈರ್ಯ ನಮ್ಮ ಹೆಮ್ಮೆಯನ್ನು ಇಮ್ಮಡಿಗೊಳಿಸುತ್ತದೆ. ಜೈ ಹಿಂದ್.. ಆಪರೇಷನ್ ಸಿಂಧೂರ ಎಂದು ಭಾರತೀಯ ಸೇನೆಗೆ ಮೋಹನ್ ಲಾಲ್ ಮೆಚ್ಚುಗೆ ಸೂಚಿಸಿದ್ದಾರೆ.

ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಬಲಿಯಾಗಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸುತ್ತಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


Spread the love

LEAVE A REPLY

Please enter your comment!
Please enter your name here