ಬೆಂಗಳೂರು:ಸಿದ್ದರಾಮಯ್ಯ ಅವರ ತವರು ಜಿಲ್ಲೆ. ಅವರ ಭಾಗಿತ್ವ ಇಲ್ಲದೇ ಈ ಮಟ್ಟದ ಭ್ರಷ್ಟಾಚಾರ ಅಸಾಧ್ಯ. ಅವರಿಗೆ ಗೊತ್ತಿದ್ದೆ ವಂಚನೆ ನಡೆದಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ. ಅವರ ಭಾಗಿತ್ವ ಇಲ್ಲದೇ ಈ ಮಟ್ಟದ ಭ್ರಷ್ಟಾಚಾರ ಅಸಾಧ್ಯ. ಅವರಿಗೆ ಗೊತ್ತಿದ್ದೆ ವಂಚನೆ ನಡೆದಿದೆ. ಮುಡಾ ಹಗರಣದಲ್ಲಿ ಸಿಎಂ ನೈತಿಕ ಹೊಣೆ ಹೊರಬೇಕು. ಈ ಎರಡೂ ಬಹು ದೊಡ್ಡ ಹಗರಣಗಳಲ್ಲಿ ಸಿಎಂ ವಿರುದ್ಧ ತನಿಖೆ ಆಗಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಅವರಿಗೂ SIT ನೋಟಿಸ್ ನೀಡಬೇಕು ಮತ್ತು ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು. ಇನ್ನು, ಮುಡಾ ಹಗರಣದಲ್ಲಿ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ. ಅವರ ಹಸ್ತಕ್ಷೇಪ, ಭಾಗಿ ಇಲ್ಲದೇ ಇರಲು ಸಾಧ್ಯವಿಲ್ಲ. ಹಾಗಾಗಿ ಇದರಲ್ಲಿ ಸಿಎಂ ವಿರುದ್ಧ ನೇರ ತನಿಖೆ ಆಗಬೇಕು” ಎಂದು ಪ್ರಲ್ಹಾದ ಜೋಶಿ ಒತ್ತಾಯಿಸಿದರು.