ದೆಹಲಿಯಲ್ಲಿ ಅರಾಜಕತೆ ಸೃಷ್ಟಿ ಮಾಡುತ್ತಿದ್ದವರಿಗೆ ಕಪಾಳ ಮೋಕ್ಷವಾಗಿದೆ: ಎಎಪಿ ಸೋಲಿಗೆ ಜೋಶಿ ಟೀಕೆ!

0
Spread the love

ಹುಬ್ಬಳ್ಳಿ:- ದೆಹಲಿಯಲ್ಲಿ ಅರಾಜಕತೆ ಸೃಷ್ಟಿ ಮಾಡುತ್ತಿದ್ದವರಿಗೆ ಕಪಾಳ ಮೋಕ್ಷವಾಗಿದೆ ಎಂದು ಹೇಳುವ ಮೂಲಕ ಎಎಪಿ ಸೋಲಿಗೆ ಸಚಿವ ಪ್ರಹ್ಲಾದ್ ಜೋಶಿ ಟೀಕೆ ಮಾಡಿದ್ದಾರೆ.

Advertisement

ದೆಹಲಿ ಚುನಾವಣಾ ಫಲಿತಾಂಶದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೆಹಲಿಯಲ್ಲಿ ಪ್ರಧಾನಿಗಳ ನೇತೃತ್ವದಲ್ಲಿ ಬಿಜೆಪಿಗೆ ಜನ ಭರ್ಜರಿ ತೀರ್ಪು ಕೊಟ್ಟಿದ್ದಾರೆ. 46ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿ ಈಗಾಗಲೇ ಗೆದ್ದಿದೆ. ಪ್ರಧಾನಿ ಮೋದಿ, ಜೆ.ಪಿ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ದೆಹಲಿ ಜನತೆಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದರು.

ನಕಾರಾತ್ಮಕ ತಂತ್ರಗಳ ಮೂಲಕ ರಾಜಕೀಯ ಮಾಡುತ್ತಿದ್ದವರಿಗೆ ದೆಹಲಿ ಜನ ತಕ್ಕ ಪಾಠ ಕಲಿಸಿದ್ದಾರೆ. ದೆಹಲಿಯಲ್ಲಿ ಅರಾಜಕತೆ ಸೃಷ್ಟಿ ಮಾಡುತ್ತಿದ್ದವರಿಗೆ ಕಪಾಳ ಮೋಕ್ಷವಾಗಿದೆ. ನಾವು ಪ್ರಜಾಪ್ರಭುತ್ವವನ್ನು ನಂಬಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಯಶಸ್ವಿಯಾದ ರಚನಾತ್ಮಕ ಹಾಗೂ ಪ್ರಬಲ ರಾಜಕೀಯ ಪಕ್ಷ ಇರಬೇಕು ಎನ್ನುವುದು ನಮ್ಮ ಅಭಿಲಾಷೆ ಎಂದರು.


Spread the love

LEAVE A REPLY

Please enter your comment!
Please enter your name here