ವಿಜಯಸಾಕ್ಷಿ ಸುದ್ದಿ, ಧಾರವಾಡ: ಕೃಷಿ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಯೋಜನೆ ಅಡಿಯಲ್ಲಿ 11ನೇ ಹಂತದ ಕೃಷಿ ಉದ್ಯಮಶೀಲತೆ ಮಾರ್ಗದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಉದ್ಘಾಟಕರಾಗಿ ಆಗಮಿಸಿದ್ದ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಎಲ್. ಪಾಟೀಲ ಮಾತನಾಡಿ, ಕೃಷಿಯಲ್ಲಿ ಹಲವಾರು ಸವಾಲುಗಳಿದ್ದು, ಕೃಷಿ ನವೋದ್ಯಮಗಳಿಗೆ ಹೆಚ್ಚಿನ ಅವಕಾಶ ಇದೆ. ಕೃಷಿ ಕ್ಷೇತ್ರದಲ್ಲಿ ತೀವ್ರಗತಿಯಲ್ಲಿ ಬದಲಾವಣೆ ಆಗುತ್ತಿದ್ದು, ಹೊಸ ತಂತ್ರಜ್ಞಾನಕ್ಕೆ ಬೇಡಿಕೆ ಇದೆ, ಇದು ಕೃಷಿ ಸ್ಟಾರ್ಟ್ಅಪ್ಗಳಿಂದ ಪೂರೈಸಲು ಸಾಧ್ಯವೆಂದು ತಿಳಿಸಿದರು.
ಮೇ 5ರಿಂದ ಪ್ರಾರಂಭವಾದ ಒಂದು ವಾರದ ತರಬೇತಿಗಾಗಿ 34 ನೂತನ ಕೃಷಿ ನವೋದ್ಯಮಿಗಳನ್ನು ಆಯ್ಕೆ ಮಾಡಲಾಗಿದ್ದು, ಯೋಜನೆ ಅಡಿಯಲ್ಲಿ ನಾವೀನ್ಯತೆ ಇರುವ ಸ್ಟಾರ್ಟ್ಅಪ್ಗಳಿಗೆ ಆರ್ಥಿಕ ಹಾಗೂ ತಾಂತ್ರಿಕ ನೆರವು ನೀಡಲಾಗುತ್ತದೆ. ಕೃಷಿಕ್-ನವೋದ್ಯಮ ಪೋಷಣ ಕೇಂದ್ರದ ಪ್ರಧಾನ ಸಂಶೋಧಕರು ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗಳಾದ ಡಾ. ಎಸ್.ಎಸ್. ಡೊಳ್ಳಿ ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿ, ಈವರೆಗೆ 92 ಸ್ಟಾರ್ಟ್ಅಪ್ಗಳಿಗೆ ತಾಂತ್ರಿಕ ಹಾಗೂ ಹಣಕಾಸಿನ ನೆರವು ನೀಡಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕೃಷಿಕ ನವೋದ್ಯಮ ಪೋಷಣಾ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.