ಹಾವೇರಿ:- ಹೃದಯಾಘಾತದಿಂದ ಮಗ ಸಾವನ್ನಪ್ಪಿದ ಸುದ್ದಿ ಕೇಳಿ ಎದೆ ಹಿಡಿದು ತಂದೆಯೂ ನಿಧನ ಹೊಂದಿರುವ ಘಟನೆ ಜಿಲ್ಲೆಯ ಬಸವೇಶ್ವರ ನಗರದಲ್ಲಿ ಜರುಗಿದೆ.
Advertisement
38 ವರ್ಷದ ಮಗ ಡಾ. ವಿನಯ್ ಗುಂಡಗಾವಿ ಹಾಗೂ 68 ವರ್ಷದ ತಂದೆ ಡಾ. ವೀರಭದ್ರಪ್ಪ ಗುಂಡಗಾವಿ ಮೃತಪಟ್ಟ ದುರ್ದೈವಿಗಳು. ವೃತ್ತಿಯಲ್ಲಿ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ.
ಮಗನ ಸಾವಿನ ಸುದ್ದಿ ಕೇಳಿದ ತಂದೆ ಡಾ.ವೀರಭದ್ರಪ್ಪ ಗುಂಡಗಾವಿಗೆ ಹಾವೇರಿಯಲ್ಲಿ ಹೃದಯಾಘಾತವಾಗಿದೆ. ಹೃದಯಾಘಾತದಿಂದ ತಂದೆಯೂ ಕೊನೆಯುಸಿರೆಳೆದಿದ್ದಾರೆ. ಮಗ ಡಾ. ವಿನಯ ಹುಬ್ಬಳ್ಳಿಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ತಂದೆ ಡಾ.ವೀರಭದ್ರಪ್ಪ ಹಾವೇರಿಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ತಂದೆ ಮತ್ತು ಮಗ ಯಾವಾಗಲೂ ಅತ್ಯಂತ ಪ್ರೀತಿಯಿಂದಲೆ ಇರುತ್ತಿದ್ದರು. ಹೀಗಾಗಿ ಮಗ ಡಾ.ವಿನಯನ ಸಾವಿನ ಸುದ್ದಿ ಕೇಳಿದ ತಂದೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.