ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂಥೆರೋ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಹಿರಿಯ ನಟಿ ಶ್ರುತಿ ಹಾಗೂ ಮಗಳು ಗೌರಿ ಕೂಡ ಜೊತೆಗಿದ್ದರು.
ತರುಣ್ ಸುಧೀರ್, ಸೋನಲ್, ನಟಿ ಶ್ರುತಿ ಕೃಷ್ಣ ಪುತ್ರಿ ಗೌರಿ ಸೇರಿದಂತೆ ಕೆಲವು ಸ್ನೇಹಿತರು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದಾರೆ. ಮಂಜುನಾಥನ ದರ್ಶನ ಪಡೆದಿರುವ ಫೋಟೋಗಳನ್ನು ಸೋನಲ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಸೋನಲ್ ಹಾಗೂ ತರುಣ್ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಮಾಡಿದ್ದಾರೆ. ಅವರಿಂದ ಆಶೀರ್ವಾದ ಪಡೆದಿದ್ದಾರೆ. ಇಬ್ಬರು ಸಾಂಪ್ರಾದಾಯಿಕ ಉಡುಗೆಯಲ್ಲಿ ಗಮನ ಸೆಳೆದಿದ್ದಾರೆ. ರಾಬರ್ಟ್ ಸಿನಿಮಾದಲ್ಲಿ ತರುಣ್ ಹಾಗೂ ಸೋನಲ್ ಒಟ್ಟಿಗೆ ಕೆಲಸ ಮಾಡಿದ್ದು ಈ ವೇಳೆ ಪ್ರೀತಿ ಹುಟ್ಟಿಕೊಂಡಿದೆ. ಆ ಬಳಿಕ ಕಳೆದ ವರ್ಷ ಅದ್ದೂರಿಯಾಗಿ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.