HomeKarnataka NewsMalemahadeshwara Hills: ವಿಶೇಷ ಸಚಿವ ಸಂಪುಟ ಸಭೆ: ಮೈಸೂರಿನಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ!

Malemahadeshwara Hills: ವಿಶೇಷ ಸಚಿವ ಸಂಪುಟ ಸಭೆ: ಮೈಸೂರಿನಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ!

For Dai;y Updates Join Our whatsapp Group

Spread the love

ಮಲೆ ಮಹದೇಶ್ವರ: ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದೆ. ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,

ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದರು ತಿಳಿಸಿದರು.

ಮಹದೇಶ್ವರ ಬೆಟ್ಟದ ಸಂಪುಟ ಸಭೆಯ ಹೈಲೈಟ್ಸ್ ಏನು?

*ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು

*3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ.

*PWD, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆಗಳಿಗೆ

*1787 ಕೋಟಿ ನೀರಾವರಿ, sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು.

*ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು.

*ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್ ಗಳ ಜಿಲ್ಲಾಸ್ಪತ್ರೆ.

*ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ.

*ಹನೂರಿನಲ್ಲಿ ಹೊಸ ತಾಲ್ಲೂಕಿಗೆ ತಾಲ್ಲೂಕಾ ಆಸ್ಪತ್ರೆ, ತಾಲ್ಲೂಕಾ ಭವನ ನಿರ್ಮಾಣ.

*ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.

*ವರುಣಾದ ಇಳಿಯಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ

*40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ.

*ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು.

*ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ.

*ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ.

*ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ

*ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ.

*ಒಟ್ಟಾಗಿ, 3647.62 ಕೋಟಿ ವೆಚ್ಚದಲ್ಲಿ ಮೈಸೂರು  ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳು ನಡೆಯಲಿವೆ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!