Home Sports News ಚಿನ್ನಸ್ವಾಮಿ ಪಂದ್ಯಕ್ಕೆ ಶಾಸಕರಿಗೆ ವಿಶೇಷ ಸೌಲಭ್ಯ: ಕೆಎಸ್‌ಸಿಎ 1+1 ಟಿಕೆಟ್ ಘೋಷಣೆ!

ಚಿನ್ನಸ್ವಾಮಿ ಪಂದ್ಯಕ್ಕೆ ಶಾಸಕರಿಗೆ ವಿಶೇಷ ಸೌಲಭ್ಯ: ಕೆಎಸ್‌ಸಿಎ 1+1 ಟಿಕೆಟ್ ಘೋಷಣೆ!

0
ಚಿನ್ನಸ್ವಾಮಿ ಪಂದ್ಯಕ್ಕೆ ಶಾಸಕರಿಗೆ ವಿಶೇಷ ಸೌಲಭ್ಯ: ಕೆಎಸ್‌ಸಿಎ 1+1 ಟಿಕೆಟ್ ಘೋಷಣೆ!
Spread the love

ಬೆಂಗಳೂರು: ನಗರದ ಚಿನ್ನಸ್ವಾಮಿ ಮೈದಾನದಲ್ಲಿ ಶನಿವಾರ ರಾತ್ರಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ಸಂಬಂಧಿಸಿದ ಟಿಕೆಟ್ ವಿಚಾರ ಇದೀಗ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕೆಎಸ್‌ಸಿಎ ಶಾಸಕರಿಗೆ 1+1 ಟಿಕೆಟ್ ನೀಡಲು ಒಪ್ಪಿಕೊಂಡಿದೆ. ಪಂದ್ಯಕ್ಕೆ ಆಹ್ವಾನ ನೀಡುವ ಉದ್ದೇಶದಿಂದ ವೆಂಕಟೇಶ್ ಪ್ರಸಾದ್ ನೇತೃತ್ವದ ತಂಡವು ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಹಾಗೂ ಡಿಕೆ ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿತು.

ಈ ವೇಳೆ ಸಿಎಂ ನಾಲ್ಕು ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದು, ಅದಕ್ಕೆ ಕೆಎಸ್‌ಸಿಎ ಸಮ್ಮತಿಸಿದೆ. ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿರುವ ಹಿನ್ನೆಲೆ, ನಾಳಿನ ಪಂದ್ಯಕ್ಕೆ 1+1 ಟಿಕೆಟ್ ಮತ್ತು ಮುಂದಿನ ಪಂದ್ಯಗಳಿಗೆ ನಾಲ್ಕು ಟಿಕೆಟ್ ನೀಡುವ ಭರವಸೆ ನೀಡಲಾಗಿದೆ.

ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಶಾಸಕರಿಗೆ ಟಿಕೆಟ್ ಕೇಳುವ ಹಕ್ಕು ಇದೆ, ಏಕೆಂದರೆ ಅವರು ಸರ್ಕಾರದ ಭಾಗವಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಈ ವಿಷಯದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಹೇಳಿಕೆಗೆ ತಿರುಗೇಟು ನೀಡುತ್ತಾ, ತಮ್ಮ ಪಕ್ಷದ ನಾಯಕರಿಗೆ ಜ್ಞಾನ ನೀಡಲಿ ಎಂದು ಪ್ರತಿಕ್ರಿಯಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here