ವಿಜಯಸಾಕ್ಷಿ ಸುದ್ದಿ, ಗದಗ: ಎಸ್ಡಿಪಿಐ ಪಕ್ಷದ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಆಫ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ಕಾರ್ಯದರ್ಶಿ ಆಫ್ಸರ್ ಕೆ.ಆರ್. ನಗರ ಅವರ ಸಮ್ಮುಖದಲ್ಲಿ, ಬಿಲಾಲ್ ಗೋಕಾವಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ಮುಂದಿನ ಚಟುವಟಿಕೆಗಳ ರೂಪುರೇಷೆ, ಸ್ಥಳೀಯ ರಾಜಕೀಯ ಪರಿಸ್ಥಿತಿಗಳ ಕುರಿತು ಚರ್ಚಿಸಲಾಯಿತು. ಸಂಘಟನೆಯ ಉದ್ದೇಶ ಮತ್ತು ಜವಾಬ್ದಾರಿಗಳನ್ನು ಮನದಟ್ಟಾಗಿ ಅನುಸರಿಸುವ ಕುರಿತು ಆಫ್ಸರ್ ಕೊಡ್ಲಿಪೇಟೆ ಮಾತನಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಅನ್ವರ್ ಬಾಗೇವಾಡಿ, ಉಪಾಧ್ಯಕ್ಷ ಹಿದಾಯತುಲ್ಲಾ ಕಾಗದಗಾರ, ಜಿಲ್ಲಾ ಸಮಿತಿ ಸದ್ಯಸ ಜಿಲಾನಿ ಮುಲ್ಲಾ, ಕಾರ್ಯದರ್ಶಿ ಸಮೀರ್ ಕೊಟ್ಟೂರ್, ಫಯಾಜ್, ಮುಸ್ತಾಕ್ ಕಟ್ಟಿಮನಿ, ಮುಸ್ತಾಕ್ ಹೊಸಮನಿ, ಜಿಲಾನಿ ಲಕ್ಕುಂಡಿ, ಉಪಸ್ಥಿತರಿದ್ದರು.
ಪಕ್ಷದ ಜಿಲ್ಲಾ ಪ್ರದಾನ ಕಾರ್ಯದರ್ಶಿ ಅಫ್ಫಾನ್ ತರಾಫ್ದರ್ ಸ್ವಾಗತಿಸಿದರು.