ವಿಜಯಸಾಕ್ಷಿ ಸುದ್ದಿ, ಗದಗ: ಜಮ್ಮು-ಕಾಶ್ಮೀರದಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಗುಂಡಿನ ದಾಳಿ ಮಾಡಿ 30 ಜನರ ಕಗ್ಗೊಲೆ ಮಾಡಿದ ಪಾಕಿಸ್ತಾನ ಬೆಂಬಲಿತ ಉಗ್ರರ ವಿರುದ್ಧ ಭಾರತೀಯ ಸೇನೆ ಸಮರ ಸಾರಿದ್ದು, ಈ ಯುದ್ಧದಲ್ಲಿ ಭಾರತೀಯ ಸೇನೆ ಜಯಶಾಲಿಯಾಗಲೆಂದು ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ವೀರೇಶ್ವರ ಪುಣ್ಯಾಶ್ರಮದ ಪಂಡಿತ ಪುಟ್ಟರಾಜ ಕವಿಗಳ ಆಶ್ರಮದಲ್ಲಿ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Advertisement
ಈ ಕಾರ್ಯಕ್ರಮದಲ್ಲಿ ಸರ್ವ ಸದಸ್ಯರು ಪಾಲ್ಗೊಳ್ಳಬೇಕೆಂದು ಗದುಗಿನ ಸರಾಫ ಅಸೋಸಿಯೇಶನ್ ಅಧ್ಯಕ್ಷ ಸಿದ್ದಲಿಂಗೇಶ ದೇವೆಂದ್ರಪ್ಪ ಮೂರಶಿಳ್ಳಿನ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.