ವಿಜಯಸಾಕ್ಷಿ ಸುದ್ದಿ, ಗದಗ: `ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ನಮ್ಮ ವೀರ ಸೈನಿಕರಿಗೆ ಹಾಗೂ ಪ್ರಧಾನಮಂತ್ರಿ ಮೋದಿಯವರಿಗೆ ಭಗವಂತ ಇನ್ನಷ್ಟು ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
Advertisement
ಪ್ರಮುಖರಾದ ಸಂತೋಷ ಅಕ್ಕಿ, ಅನಿಲ್ ಅಬ್ಬಿಗೇರಿ, ಬಸವರಾಜ ನರೇಗಲ್, ಕಾರ್ತಿಕ್ ಶಿಗ್ಲಿಮಠ್, ವಿನಾಯಕ ಹೊರಕೇರಿ ಸೇರಿದಂತೆ ಯುವ ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.