ಸಿಎಂ ಸಿದ್ದರಾಮಯ್ಯರಿಗಾಗಿ ವಿಶೇಷ ಪೂಜೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಮಸ್ತ ಶೋಷಿತ ವರ್ಗಗಳ ಕಣ್ಮಣಿ, ಧೀಮಂತ ನಾಯಕ, ರಾಜ್ಯಕ್ಕೆ ಗ್ಯಾರಂಟಿಗಳನ್ನು ನೀಡಿದ ಸರದಾರ ಸಿದ್ದರಾಮಯ್ಯ ಅವರು ಮಾರ್ಚ್ 7ರಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಅಂಶಗಳು ಸರ್ವರಿಗೂ ಅನುಕೂಲಕರವಾಗಿರಲಿ ಹಾಗೂ ಮುಖ್ಯಮಂತ್ರಿಗಳು ಐದು ವರ್ಷಗಳ ಕಾಲ ಯಶಸ್ವಿಯಾಗಿ ಅಧಿಕಾರ ಮುಂದುವರೆಸಲಿ ಎಂದು ನಗರದ ಬಯಲು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಶ್ರೀ ರಾಕೇಶ ಸಿದ್ದರಾಮಯ್ಯ ಐಟಿಐ ಕಾಲೇಜಿನ ಅವರಣದಲ್ಲಿ ಸಂಭ್ರಮಾಚರಣೆ ಆಚರಿಸಲಾಗುವದು.

Advertisement

ಮಾ. 7ರಂದು ಜಿಲ್ಲೆಯ ಸಮಾಜ ಬಾಂಧವರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಹಿತೈಷಿಗಳು ತಮ್ಮ ತಮ್ಮ ಗ್ರಾಮಗಳಲ್ಲಿರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಸಿದ್ದರಾಮಯ್ಯರವರಿಗೆ ಶುಭ ಹಾರೈಸಲು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕೀರಪ್ಪ ಹೆಬಸೂರ ಹಾಗೂ ಸಮಾಜದ ಯುವ ಮುಖಂಡರಾದ ರಾಮಕೃಷ್ಣ ರೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here