ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಡಾ. ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ದೊರೆಯಲಿ ಎಂಬ ಆಶಯದೊಂದಿಗೆ ಗುರುವಾರ ಗದಗ ನಗರದ ಚಾವಡಿ ಕೂಟದಲ್ಲಿರುವ ಶ್ರೀ ಕರಿದೇವರು ದೇವಸ್ಥಾನದಲ್ಲಿ ಶ್ರೀ ಸೋಮನಾಥೇಶ್ವರನಿಗೆ ಮಹಾರುದ್ರಾಭಿಷೇಕ ಪೂಜೆ ನೆರವೇರಿಸಲಾಯಿತು.
14ನೇ ವಾರ್ಡ್ನ ಯುವ ಕಾಂಗ್ರೆಸ್ ಮುಖಂಡ ನವೀನ್ ಜಾಲಿಹಾಳ ಅವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಡಾ. ಎಚ್.ಕೆ. ಪಾಟೀಲರು ರಾಜ್ಯ ರಾಜಕಾರಣದಲ್ಲಿ ಅನುಭವಿಗಳಾಗಿದ್ದು, ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತು ಜಿಲ್ಲೆಯ ಜನರ ಆಶಯ ಈಡೇರಲಿ ಎಂದು ನವೀನ್ ಜಾಲಿಹಾಳ ಪ್ರಾರ್ಥಿಸಿದರು.



