ಸೈನಿಕರ ಶ್ರೇಯಸ್ಸಿಗಾಗಿ ವಿಶೇಷ ಪೂಜೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಉಗ್ರರ ನೆಲೆಗಳ ಮೇಲೆ ಭಾರತೀಯ ಸೈನಿಕರ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಗದಗ ವತಿಯಿಂದ ನಗರದ ಕಿಲ್ಲಾ ಓಣಿಯಲ್ಲಿರುವ ಜೋಡ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

Advertisement

ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಯನ್ನು ದೇಶದಾದ್ಯಂತ ಅಭಿನಂದಿಸಲಾಗುತ್ತಿದೆ. ಪಹಲಗಾಂನಲ್ಲಿ ಅಮಾಯಕರ ಹತ್ಯೆ ಖಂಡಿಸಿ ಅದರ ಪ್ರತೀಕಾರಕ್ಕಾಗಿ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ದಾಳಿ ಮಾಡಿ ಯಶಸ್ಸು ಕಂಡಿರುವ ನಮ್ಮ ಸೈನಿಕರಿಗೆ, ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಯಶಸ್ಸು, ಆರೋಗ್ಯ, ಆಯುಷ್ಯ ಹೆಚ್ಚಲಿ ಎಂದು ವಿಶೇಷ ಪೂಜೆ ಹಾಗೂ ಅಭಿಷೇಕ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಮಾತನಾಡಿ, ಇನ್ನೊಮ್ಮೆ ಭಾರತ ದೇಶದ ತಂಟೆಗೆ ಬಂದರೆ ಸೇನೆಯ ನಿರ್ಣಯ ಇದಕ್ಕಿಂತ ಕಠೋರವಾಗಿರುತ್ತದೆ ಎಂಬುದನ್ನು ತೋರಿಸಿಕೊಟ್ಟ ನಮ್ಮ ಹೆಮ್ಮೆಯ ಸೈನಿಕರಿಗೆ ಹಾಗೂ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ ಮಾತನಾಡಿದರು. ಗದಗ ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ ಸ್ವಾಗತಿಸಿ ವಂದಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಎಂ.ಎಸ್. ಕರಿಗೌಡ್ರ, ಶ್ರೀಪತಿ ಉಡುಪಿ, ಜಗನ್ನಾಥಸಾ ಭಾಂಡಗೆ, ನಗರಸಭಾ ಸದಸ್ಯರುಗಳಾದ ಅನಿಲ ಅಬ್ಬಿಗೇರಿ, ರಾಘವೇಂದ್ರ ಯಳವತ್ತಿ, ಶಶಿಧರ ದಿಂಡೂರ, ನಾಗರಾಜ ತಳವಾರ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ ಅಕ್ಕಿ, ಪ್ರಮುಖರಾದ ಕೆ.ಪಿ. ಕೋಟಿಗೌಡ್ರ, ಸುಧೀರ ಕಾಟಿಗರ, ಸಂಗನಾಳ ವಕೀಲರು, ರಾಚಯ್ಯ ಹೊಸಮಠ, ಮಂಜುನಾಥ ಶಾಂತಗೇರಿ, ಪಂಚಾಕ್ಷರಿ ಅಂಗಡಿ, ರವಿ ಮಾನ್ವಿ, ರಮೇಶ ಹತ್ತಿಕಾಳ, ಬಸವರಾಜ ಮಡಿವಾಳರ, ಬಸವರಾಜ ನರೆಗಲ್, ವಿನಾಯಕ ಹೊರಕೇರಿ, ರವಿ ಚವ್ಹಾಣ, ರಾಜು ಕಾಟಿಗರ, ನಾರಾಯಣ ಸಿಖಾಂದರ, ಸುನೀಲ ಬೇವಿನಕಟ್ಟಿ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here