ವಿಜಯಸಾಕ್ಷಿ ಸುದ್ದಿ, ಗದಗ : ಎ.ಪಿ.ಎಂ.ಸಿ ಯಾರ್ಡ್ನಲ್ಲಿ ದಲಾಲ ವರ್ತಕರ ಸಂಘ, ಖರೀದಿದಾರರ ಸಂಘದ ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿ ವತಿಯಿಂದ ಪ್ರತಿಷ್ಠಾಪಿಸಿರುವ ಗಣೇಶನಿಗೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಕೃಷ್ಣಗೌಡ ಪಾಟೀಲ ಗುರುವಾರ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಸಮಿತಿ ವತಿಯಿಂದ ಕೃಷ್ಣಗೌಡ ಪಾಟೀಲರನ್ನು ಸನ್ಮಾನಿಸಲಾಯಿತು. ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿ ಅಧ್ಯಕ್ಷ ತಿಮ್ಮಣ್ಣ ಕೋನರೆಡ್ಡಿ, ಗೌರವ ಅಧ್ಯಕ್ಷ ಪ್ರಮೋದ ವಾರಕರ, ಕಾರ್ಯದರ್ಶಿ ರಾಜಶೇಖರ ಮುಧೋಳ, ಉಪಾಧ್ಯಕ್ಷ ರಾಜು ಮೂಲಿಮನಿ, ಸಹ ಕಾರ್ಯದರ್ಶಿ ಚಂದ್ರಕಾಂತ ಸವದತ್ತಿ, ಖಜಾಂಚಿ ಮಹೇಶ ಗಾಣಗೇರ, ಸಹ ಖಜಾಂಚಿ ನೀತಿಶ ವಾಲಿ, ವಿನಾಯಕ ವಜ್ರೇಶ್ವರಿ, ವಿವೇಕಾನಂದ ಗುಡಿಮನಿ, ಕೊಟ್ರೇಶ ಬಾಳಿಕಾಯಿ, ಗಿರೀಶ ಅಳವಂಡಿ, ದಯಾನಂದ ಗುಂಡಪ್ಪನವರ, ವಿನಯ ಕಾಡಪ್ಪನವರ, ಪ್ರಕಾಶ ಖೋಡೆ, ಅಶೋಕ ಮಂದಾಲಿ, ಮುತ್ತಣ್ಣ ಅಂಗಡಿ, ಅಜಿತ ಪುಣೇಕರ, ಮಂಜುನಾಥ ಕವಲೂರ ಸೇರಿದಂತೆ ದಲಾಲ ವರ್ತಕರ ಸಂಘದ ಹಾಗೂ ಖರೀದಿದಾರರ ಸಂಘದ ಪದಾಧಿಕಾರಿಗಳು ಇದ್ದರು.