ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಭಯೋತ್ಪಾದಕರನ್ನು ಸದೆಬಡಿಯಲು ಕೇಂದ್ರ ಸರಕಾರ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬಾಳೆಹೊನ್ನೂರ ಶ್ರೀ ರಂಬಾಪುರಿ ವೀರಸೋಮೇಶ್ವರ ಜಗದ್ಗುರುಗಳು ಆಗ್ರಹಿಸಿದ್ದಾರೆ.
ಅವರು ಪಟ್ಟಣದ ಚನ್ನಬಸಯ್ಯ ಬಾಳಿಹಳ್ಳಿಮಠ ಕಲ್ಯಾಣಮಂಟಪದಲ್ಲಿ ನಡೆದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಶ್ಮೀರದಲ್ಲಿ ಹಿಂದೂಗಳ ಹಾಗೂ ವಿದೇಶಿ ಪ್ರಜೆಗಳ ಹತ್ಯೆ ನಡೆದಿದ್ದು ಅಮಾನವೀಯ ಘಟನೆ. ಭಾರತ ದೇಶದ ಅವಿಭಾಜ್ಯ ಅಂಗ ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ 360 ಆರ್ಟಿಕಲ್ ರದ್ದು ಮಾಡಿ ಅಲ್ಲಿ ಒಳ್ಳೆಯ ಆಡಳಿತ ನಡೆಸಲು ಪ್ರಯತ್ನ ಮಾಡಿದ್ದಾರೆ. ಅದಕ್ಕೆ ಅಲ್ಲಿಯ ಜನರೂ ಸ್ಪಂದಿಸಿದ್ದಾರೆ. ಆದರೆ ಕೆಲವು ಇಸ್ಲಾಮಿಕ್ ಭಯೋತ್ಪಾದಕರು ಹಿಂದೂಗಳ ಮೇಲೆ ಏಕಾಏಕಿ ಗುಂಡು ಹಾರಿಸಿ ಕೊಲೆ ಮಾಡಿದ್ದು ಖಂಡನೀಯವಾಗಿದೆ.
ದೇಶದ ಎಲ್ಲಾ ಜನರಿಗೆ ಈ ಘಟನೆ ಆಘಾತ ಉಂಟುಮಾಡಿದೆ. ಮುಂದಿನ ದಿನಮಾನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.