ಸಿಬ್ಬಂದಿಗಳು ಚಾಕಚಕ್ಯತೆಯಿಂದ ಕಾರ್ಯನಿರ್ವಹಿಸಿ

0
HUMAN TRAFFICING
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದ ಸಭಾಭವನದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಹಾಗೂ ಐಟಿಪಿಎ ೧೯೫೬ ಕಾಯ್ದೆಯ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಮತ್ತು ಕಾವಲು ಸಮಿತಿ ಸದಸ್ಯರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Advertisement

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಅನ್ನಪೂರ್ಣ ಗಾಣಗೇರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಒಂದು ಹೇಯ ಕೃತ್ಯವಾಗಿದೆ. ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯಲು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚಾಕಚಕ್ಯತೆಯಿಂದ ಕಾರ್ಯನಿರ್ವಹಿಸಬೇಕಾಗಿದೆ. ಅದಕ್ಕಾಗಿ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಡಾ. ಕಮಲವ್ವ ಬೈಲೂರ ಸ್ವಾಗತ ಮತ್ತು ಪ್ರಸ್ತಾವಿಕ ನುಡಿಗಳನ್ನಾಡಿ, ಇಂದಿನ ದಿನಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಅಂಕಿ-ಸಂಖ್ಯೆಗಳನ್ನು ನೋಡಿದಾಗ ಆತಂಕವಾಗುವಂತಿದೆ. ಎಲ್ಲಾ ಇಲಾಖೆಯ ಸಹಕಾರದೊಂದಿಗೆ ಇಂತಹ ಪ್ರಕರಣಗಳಾಗದಂತೆ ತಡೆಗಟ್ಟುವ ಅವಶ್ಯಕತೆ ಇದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಜಿ.ಮಣ್ಣೂರ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಯು ಯಾವ ಯಾವ ರೀತಿಯಲ್ಲಿ ಆಗುತ್ತಿದೆ ಎಂದು ವಿವರಿಸಿ, ಗ್ರಾಮ ಮಟ್ಟದಿಂದಲೇ ಅದನ್ನು ತಡೆಯಲು ಕ್ರಮ ಕೈಗೊಳ್ಳವುದು ಅವಶ್ಯಕವಿದ್ದು, ಸಂಬಂಧಪಟ್ಟ
ಅಧಿಕಾರಿಗಳು ತರಬೇತಿಯನ್ನು ಯಶಸ್ವಿಯಾಗಿ ಪಡೆಯಲು ತಿಳಿಸಿದರು.

ಕಾರ್ಯಕ್ರಮಕ್ಕೆ ಶಹರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಡಿ.ಬಿ. ಪಾಟೀಲ್ ಉಪನ್ಯಾಸಕರಾಗಿ ಆಗಮಿಸಿ ಮಾತನಾಡಿ, ಸವಿವರವಾಗಿ ಮಾಹಿತಿ ನೀಡಿದರು. ವಕೀಲರಾದ ಪ್ರಕಾಶ ವಾಲಿ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಹಾಗೂ ITPA, ೧೯೫೬ ಕಾಯ್ದೆಯ ಕುರಿತು ಸವಿವರವಾಗಿ ತಿಳಿಸಿದ್ದಲ್ಲದೆ ವಿವಿಧ ಇಲಾಖೆಗಳ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.

ಸುನೀತಾ ನಾಡಿಗೇರ್ ಕಾರ್ಯಕ್ರಮ ನಿರೂಪಿಸಿದರು. ಪ್ರಭಾವತಿ ಮುದಿಗೌಡ್ರ ವಂದಿಸಿದರು.

ಅಧ್ಯಕ್ಷತೆ ವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಯು ಕೇವಲ ಒಂದು ಪ್ರದೇಶದಲ್ಲಿರದೇ ಅದು ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಪ್ರವೃತ್ತವಾಗಿದೆ. ಸಂಬಂಧಪಟ್ಟ ಇಲಾಖೆ ಮತ್ತು ಸಮಾಜದ ಪ್ರಮುಖ ವ್ಯಕ್ತಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಂತಹ ದುಷ್ಟ ಕಾರ್ಯವನ್ನು ಸಂಪೂರ್ಣವಾಗಿ ನಾಶ ಮಾಡಬೇಕಾಗಿದೆ. ಅದಕ್ಕಾಗಿ ಇಂತಹ ತರಬೇತಿ ಅವಶ್ಯವಾಗಿದ್ದು, ಸಂಪನ್ಮೂಲ ವ್ಯಕ್ತಿಗಳಿಂದ ಕಾಯ್ದೆ-ಕಾನೂನುಗಳ ಬಗ್ಗೆ ಅರ್ಥೈಸಿಕೊಂಡು ಎಲ್ಲಾ ಕಡೆ ಕಾರ್ಯಪ್ರವೃತ್ತರಾಗಲು ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here