ಡಿಜಿಎಮ್ ಆಯುರ್ವೇದ ಕಾಲೇಜಿನ ಸಿಬ್ಬಂದಿ ಆತ್ಮಹತ್ಯೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಡಿಜಿಎಮ್ ಆಯುರ್ವೇದ ಕಾಲೇಜಿನ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ಮೂಲತಃ ಬೆಳಗಾವಿ ಜಿಲ್ಲೆಯ ಸಂಕೇಶ್ವರದ ಸೈಫ್ ಅಲಿ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ತಂದೆಯ ಅಕಾಲಿಕ ನಿಧನದ ನಂತರ ಅನುಕಂಪದ ಆಧಾರದಲ್ಲಿ ಸರಕಾರಿ ನೌಕರಿ ಪಡೆದಿದ್ದ  ಸೈಫ್ಅಲಿ, ತಂಗಿಯ ಮದುವೆ ಮಾಡಿಕೊಟ್ಟಿದ್ದ ಎನ್ನಲಾಗಿದೆ.

ತಂಗಿಯ ಮಗಳು ಅನಾರೋಗ್ಯದಿಂದ ಮೊನ್ನೆ ಮೃತಪಟ್ಟಿದ್ದು, ನಿನ್ನೆ ಸಂಜೆ ಗದಗಕ್ಕೆ ಬಂದಿದ್ದರು.  ತಂಗಿಯ ಮಗಳ ಸಾವಿನಿಂದ ತೀವ್ರವಾಗಿ ನೊಂದಿದ್ದ ಸೈಫ್ಅಲಿ ನಿನ್ನೆ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

 


Spread the love

LEAVE A REPLY

Please enter your comment!
Please enter your name here