ಕಾಲ್ತುಳಿತ ಕೇಸ್: ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡ ಮಕ್ಕಳ ಹಕ್ಕುಗಳ ಆಯೋಗ!

0
Spread the love

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತ ಘಟನೆ ಕಾಂಗ್ರೆಸ್​ ಆಡಳಿತಕ್ಕೆ ಮಾತ್ರ ಕಪ್ಪು ಚುಕ್ಕೆ ಅಲ್ಲ. ಬೆಂಗಳೂರಿಗರು ನೋಡಿದರ ದೊಡ್ಡ ದುರಂತವೇ ಆಗಿದೆ. ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದು, ಮಕ್ಕಳಿಗೂ ಗಾಯಗಳಾಗಿರುವ ಬಗ್ಗೆ ಮಾಹಿತಿ ಇರುವುದರಿಂದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ.

Advertisement

ಆಯೋಗವು ಸಿಐಡಿಗೆ ಪತ್ರ ಬರೆದು ಮಕ್ಕಳಿಗೆ ಆದ ಹಾನಿಯ ಬಗ್ಗೆ ಮಾಹಿತಿ ಕೋರಿದೆ. ಹೌದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾಕಷ್ಟು ಜನ ಮಕ್ಕಳು ತೊಂದರೆಗೆ ಒಳಗಾಗಿರುವ ಬಗ್ಗೆ ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ನೋಟಿಸ್ ನೀಡಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ವಿಜಯೋತ್ಸವದ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿದ್ದರು. ಅವಘಡದಲ್ಲಿ ಸಾಕಷ್ಟು ಜನ ಮಕ್ಕಳಿಗೆ ತೊಂದರೆಯಾಗಿರುವ ಮಾಹಿತಿ ಇದೆ. ಆದರೆ ನಿಖರವಾಗಿ ಎಷ್ಟು ಮಕ್ಕಳಿಗೆ ಸಮಸ್ಯೆಯಾಗಿದೆ ಏನಾಗಿದೆ ಎಂಬುದರ ವಿವರ ಸಿಕ್ಕಿಲ್ಲ. ಹೀಗಾಗಿ ಮಕ್ಕಳ ಹಕ್ಕು ಆಯೋಗವು ಸಿಐಡಿಗೆ ವಿವರ ಕೋರಿ ನೋಟಿಸ್ ಜಾರಿ ಮಾಡಿದೆ.


Spread the love

LEAVE A REPLY

Please enter your comment!
Please enter your name here