ಕಾಲ್ತುಳಿತ ಪ್ರಕರಣ: ಸರ್ಕಾರವನ್ನೋ, ಪೊಲೀಸರನ್ನೋ ತಪ್ಪಿಸ್ಥರನ್ನಾಗಿ ಮಾಡುವುದಲ್ಲ – ಪ್ರದೀಪ್ ಈಶ್ವರ್

0
Spread the love

ರಾಯಚೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವಕ್ಕೆ ಸಾಗರೋಪಾದಿಯಲ್ಲಿ ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದರು. ಕಾಲಿಡಲು ಸ್ಥಳವಿಲ್ಲದಷ್ಟು ಜಾಗ ಬಿಡದ ಕಾಲ್ತುಳಿತ ಸಂಭವಿಸಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪ್ರದೀಪ್ಈಶ್ವರ್​ ಪ್ರತಿಕ್ರಿಯಿಸಿದ್ದಾರೆ.

Advertisement

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ರಾಜ್ಯದ ಜನರು ಆರ್ಸಿಬಿ ತಂಡವನ್ನು ಸ್ವಾಗತಿಸುವ ಸಂಭ್ರಮದಲ್ಲಿ ಇದ್ದರು. ಹಿನ್ನೆಲೆ ಸರ್ಕಾರ ಮುನ್ನೆಚ್ಚರಿಕೆ ವಹಿಸಿದ್ದರೂ ಲಕ್ಷಾಂತರ ಅಭಿಮಾನಿಗಳು ಬಂದಿದ್ದರಿಂದ ಎಡವಟ್ಟಾಗಿದೆ. ಸರ್ಕಾರವನ್ನೋ, ಪೊಲೀಸರನ್ನೋ ತಪ್ಪಿಸ್ಥರನ್ನಾಗಿ ಮಾಡುವುದಲ್ಲ. ಘಟನೆ ಆಗಿದೆ, ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here