ಕಾಲ್ತುಳಿತ ಪ್ರಕರಣ: ಮೃತ ರೇವತಿ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಣೆ

0
Spread the love

ಹೈದರಾಬಾದ್‌: ಡಿಸೆಂಬರ್ 4ರಂದು ಸಂಧ್ಯಾ ಥಿಯೇಟರ್​ ಬಳಿ ನಡೆದ ಕಾಲ್ತುಳಿತ ಪ್ರಕರಣ ಸದ್ದು ಮಾಡುತ್ತಲೇ ಇದೆ. ಇದೀಗ ಮೃತಪಟ್ಟ ಮಹಿಳೆ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಡಿ.4ರಂದು ‘ಪುಷ್ಪ 2’ ಪ್ರೀಮಿಯರ್ ವೇಳೆ ನಡೆದ ಕಾಲ್ತುಳಿತದಲ್ಲಿ ಮೃತ ರೇವತಿ ಪುತ್ರ ಶ್ರೀಜಾ ಕೂಡ ತೀವ್ರ ಗಂಭೀರ ಸ್ಥಿತಿಯಲ್ಲಿದ್ದು, ಈಗಾಗಲೇ ಅಲ್ಲು ಅರ್ಜುನ್ ತಂದೆ ಕುಟುಂಬಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ.

Advertisement

ಈ ಹಿಂದೆ 25 ಲಕ್ಷ ರೂ. ಕೊಡೋದಾಗಿ ತಿಳಿಸಿದರು. ಆದರೆ ಈಗ ಮೃತಪಟ್ಟ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ನೀಡೋದಾಗಿ ಅಲ್ಲು ಅರವಿಂದ್ ತಿಳಿಸಿದ್ದಾರೆ. ಅಲ್ಲು ಅರ್ಜುನ್ ಕಡೆಯಿಂದ 1 ಕೋಟಿ ರೂ. ಜೊತೆಗೆ ‘ಪುಷ್ಪ 2’ ನಿರ್ಮಾಪಕರು ಮತ್ತು ನಿರ್ದೇಶಕ ಸುಕುಮಾರ್ ಕಡೆಯಿಂದ 1 ಕೋಟಿ ರೂ.ವನ್ನು ಮೃತ ಮಹಿಳೆ ಕುಟುಂಬಕ್ಕೆ ಕೊಡಲು ನಿರ್ಧರಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here