ಚಿನ್ನಸ್ವಾಮಿ ಬಳಿ ಕಾಲ್ತುಳಿತ ದುರಂತ: ರಾಜ್ಯ ಸರ್ಕಾರಕ್ಕೆ ನೋಟಿಸ್ ಕೊಟ್ಟ ಹೈಕೋರ್ಟ್

0
Spread the love

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ ಹೈಕೋರ್ಟ್‌. ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದೀಗ ಅದರ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರಕ್ಕೆ ನೋಟೀಸ್ ನೀಡಿದೆ.

Advertisement

ಮುಂದಿನ ಮಂಗಳವಾರದ ಒಳಗಾಗಿ ಪ್ರಕರಣ ಸಂಬಂಧಿಸಿದಂತೆ ವಸ್ತುಸ್ಥಿತಿ ವರದಿ ಸಲ್ಲಿಸಬೇಕು. ವರದಿಯನ್ನು ಆಧರಿಸಿ ಮುಂದಿನ ಆದೇಶಗಳನ್ನು ನೀಡಲಾಗುವುದು ಎಂದು ತಿಳಿಸಿ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅನಿರೀಕ್ಷಿ ಘಟನೆ ನಡೆದಿದ್ದು, 11 ಮಂದಿ ಸಾವನ್ನಪ್ಪಿ, 56 ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ಮಾಧ್ಯಮಗಳು ವರದಿ ಮಾಡಿವೆ. ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲು ಹಲವು ಮಂದಿ ಮೇಲ್ ಮೂಲಕ ಮನವಿ ಮಾಡಿದ್ದಾರೆ. ಘಟನೆ ಗಂಭೀರವಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೀಠ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here