ವಿಜಯಸಾಕ್ಷಿ ಸುದ್ದಿ, ಗದಗ : ಸ್ಥಳೀಯ ನಿಮಿಷಾಂಬಾ ಅಕಾಡೆಮಿಯ ಸಂಸ್ಥಾಪಕಿ, ವಿದುಷಿ ಜ್ಯೋತಿಶ್ರೀ ಎಂ.ಎಲ್. ಅವರಿಗೆ ಭರತನಾಟ್ಯ ಮತ್ತು ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿ ವಾಹಿನಿ ವತಿಯಿಂದ ಕೊಡಮಾಡುವ ಕರುನಾಡು ಸಾಧಕರು `ಸ್ಟಾರ್ ವುಮನ್’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
Advertisement
ಇದೇ ನ. 11ರಂದು ಬೆಂಗಳೂರಿನಲ್ಲಿ ನಡೆಯುವ ಕರುನಾಡು ಸಾಧಕರು ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.