ಜಾತಿ ಜನಗಣತಿ ಮಾಡೋಕೆ ರಾಜ್ಯ ಸರ್ಕಾರಕ್ಕೆ ಅಧಿಕಾರನೇ ಇಲ್ಲ: ಸಚಿವೆ ಶೋಭಾ ಕರಂದ್ಲಾಜೆ

0
Spread the love

ಬೆಂಗಳೂರು: ಜಾತಿ ಜನಗಣತಿ ಮಾಡೋಕೆ ರಾಜ್ಯ ಸರ್ಕಾರಕ್ಕೆ ಅಧಿಕಾರನೇ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಜಾತಿಗಣತಿ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ನಮ್ಮೆಲ್ಲರನ್ನು ಒಡೆದು ಆಳುವ ನೀತಿ. ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವಂತಹ ಷಡ್ಯಂತ್ರ‍್ಯವನ್ನು ಸಿದ್ದರಾಮಯ್ಯ ಮಾಡಿದ್ದಾರೆ.

Advertisement

ಜಾತಿ ಜನಗಣತಿ ಮಾಡೋಕೆ ರಾಜ್ಯ ಸರ್ಕಾರಕ್ಕೆ ಅಧಿಕಾರನೇ ಇಲ್ಲ. ಅದನ್ನು ಕೇಂದ್ರ ಸರ್ಕಾರ ಮಾಡಬೇಕು. ಇದರ ಹೊರತಾಗಿಯೂ ಜಾತಿ ಸಮೀಕ್ಷೆ ಮಾಡಿ ಕೆಲ ಜಾತಿಗಳನ್ನು ಕಡಿಮೆ ತೋರಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಲಿಂಗಾಯತರು, ಒಕ್ಕಲಿಗರು ಸೇರಿ ಬೇರೆಬೇರೆ ಜಾತಿಯವರು ವಿರೋಧ ಮಾಡುತ್ತಿದ್ದಾರೆ. ನಾವು ಅತ್ಯಂತ ಉಗ್ರವಾಗಿ ಹೋರಾಟ ಮಾಡಲು ತೀರ್ಮಾನ ಮಾಡಿದ್ದೇವೆ. ಸಿದ್ದರಾಮಯ್ಯ ಅವರು ತಕ್ಷಣವೇ ಈ ಜಾತಿ ವರದಿಯನ್ನು ಬರ್ಕಾಸ್ತ್ ಮಾಡಬೇಕು ಎಂದು ಆಗ್ರಹಿಸಿದರು.


Spread the love

LEAVE A REPLY

Please enter your comment!
Please enter your name here