ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಅಂಬೇಡ್ಕರ್ ಭವನದಲ್ಲಿ ಫೆ.2ರಂದು ಸಾಯಂಕಾಲ 5ಕ್ಕೆ ಅವಳಿ ನಗರದ ಯುವಕರಿಂದ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಮಂಜುನಾಥ ಬೆಳದಡಿ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿ ನಗರದಲ್ಲಿ ನಡೆಯುವ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಗೆ ಮೈಸೂರು, ಮಂಗಳೂರು, ಚಿತ್ರದುರ್ಗ, ಧಾರವಾಡ, ಕಾರವಾರ ಮುಂತಾದೆಡೆಯಿಂದ ಸ್ಪರ್ಧಿಗಳು ಭಾಗವಹಿಸುತ್ತಾರೆ. ಸ್ಪರ್ಧೆಯಲ್ಲಿ ನಾಲ್ಕು ವಿಭಾಗಗಳಲ್ಲಿ ಬಹುಮಾನ ಹಾಗೂ ಪ್ರಶಸ್ತಿಪತ್ರವನ್ನು ನೀಡಲಾಗುತ್ತದೆ ಎಂದರು.
ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಭೈರನಹಟ್ಟಿ ಶಾಂತಲಿAಗ ಸ್ವಾಮೀಜಿ ಉದ್ಘಾಟಿಸುವರು. ಕಾಂಗ್ರೆಸ್ ಮುಖಂಡ ಕೃಷ್ಣಗೌಡ ಪಾಟೀಲ, ಪ್ರಭು ಬುರಬುರೆ, ರಾಹುಲ್ ಜಾರಕಿಹೊಳೆ ಸೇರಿದಂತೆ ಪ್ರಮುಖರು ಪಾಲ್ಗೊಳ್ಳುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸುನೀಲ ಜಡಿ, ದೇವು, ಅನಿಲ ಬೆಳವಣಿಕಿ, ಚಂದ್ರು ಕಾರ್ತಿಕ, ಪುನೀತ್ ತುಪ್ಪದ, ಶಿವಕುಮಾರ್ ಕೊಣ್ಣೂರ ಇದ್ದರು.