HomePolitics Newsವಿಕಸಿತ ಭಾರತ ಗುರಿಗೆ ಉಕ್ಕು ಉದ್ಯಮವೇ ಆಧಾರ: ಹೆಚ್.ಡಿ. ಕುಮಾರಸ್ವಾಮಿ

ವಿಕಸಿತ ಭಾರತ ಗುರಿಗೆ ಉಕ್ಕು ಉದ್ಯಮವೇ ಆಧಾರ: ಹೆಚ್.ಡಿ. ಕುಮಾರಸ್ವಾಮಿ

For Dai;y Updates Join Our whatsapp Group

Spread the love

ನವದೆಹಲಿ: ಭಾರತವು ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ಸಂಕಲ್ಪದ ಅಡಿಯಲ್ಲಿ 2030ರ ವೇಳೆಗೆ ವಾರ್ಷಿಕ 300 ಮಿಲಿಯನ್ ಟನ್ ಹಾಗೂ 2047ರ ವೇಳೆಗೆ 500 ಮಿಲಿಯನ್ ಟನ್ ಉಕ್ಕು ಉತ್ಪಾದನೆ ಮಾಡುವ ಮಹತ್ವಾಕಾಂಕ್ಷಿ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ನವದೆಹಲಿಯಲ್ಲಿ ಪಾಲುದಾರ ರಾಷ್ಟ್ರಗಳ ರಾಯಭಾರಿಗಳು ಹಾಗೂ ರಾಜತಾಂತ್ರಿಕ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಾಗತಿಕ ಉಕ್ಕು ಮೌಲ್ಯ ಸರಪಳಿಯೊಂದಿಗೆ ಭಾರತವನ್ನು ಇನ್ನಷ್ಟು ಬಲವಾಗಿ ಸಂಪರ್ಕಿಸುವ ಉದ್ದೇಶವಿದೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಏಪ್ರಿಲ್ 2026ರಲ್ಲಿ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ‘ಭಾರತ್ ಸ್ಟೀಲ್ 2026’ ಅಂತರರಾಷ್ಟ್ರೀಯ ಸಮ್ಮೇಳನ ಮತ್ತು ಪ್ರದರ್ಶನವು ಪ್ರಮುಖ ಪಾತ್ರ ವಹಿಸಲಿದೆ ಎಂದರು.

ಭಾರತ್ ಸ್ಟೀಲ್ 2026 ಅನ್ನು ನೀತಿ ನಿರೂಪಕರು, ಉದ್ಯಮ ನಾಯಕರು, ಹೂಡಿಕೆದಾರರು, ತಂತ್ರಜ್ಞಾನ ಪೂರೈಕೆದಾರರು ಮತ್ತು ಖರೀದಿದಾರರನ್ನು ಒಟ್ಟುಗೂಡಿಸುವ ಜಾಗತಿಕ ವೇದಿಕೆಯಾಗಿಸಲಾಗುತ್ತದೆ. ಉಕ್ಕು ಬಳಕೆಯ ವಿಸ್ತರಣೆ, ಸುಸ್ಥಿರತೆ, ಕಚ್ಚಾವಸ್ತು ಪೂರೈಕೆ ಭದ್ರತೆ, ತಾಂತ್ರಿಕ ನಾವೀನ್ಯತೆ ಮತ್ತು ಹೂಡಿಕೆ ಉತ್ತೇಜನಕ್ಕೆ ಈ ಕಾರ್ಯಕ್ರಮ ಕೇಂದ್ರೀಕರಿಸಲಿದೆ ಎಂದು ಸಚಿವರು ವಿವರಿಸಿದರು.

ಭಾರತ ಪ್ರಸ್ತುತ ಜಗತ್ತಿನ ಎರಡನೇ ಅತಿದೊಡ್ಡ ಉಕ್ಕು ಉತ್ಪಾದಕ ರಾಷ್ಟ್ರವಾಗಿದ್ದು, ಉಕ್ಕು ವಲಯವು ದೇಶದ ಜಿಡಿಪಿಗೆ ಸುಮಾರು 2.5 ಶೇಕಡಾ ಕೊಡುಗೆ ನೀಡುತ್ತಿದ್ದು, 2.8 ಮಿಲಿಯನ್ ಜನರಿಗೆ ಉದ್ಯೋಗ ಒದಗಿಸುತ್ತಿದೆ ಎಂದು ಅವರು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!