ರಾಯಚೂರು:- ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ನಿಮ್ಮ ಸರ್ಕಾರ ಬಂದಾಗಲೇ ಯಾಕೇ ಹೀಗಾಗುತ್ತೆ ಎಂದು ಪ್ರಶ್ನಿಸಿದ್ದಾರೆ.
ಬಾಂಬ್ ಹಾಕಿದವರನ್ನು ಬ್ರದರ್ಸ್ ಅಂತೀರಿ. ಗಣೇಶನ ವಿಗ್ರಹಕ್ಕೂ ಮಸೀದಿಯಿಂದ ಕಲ್ಲು ಬಿತ್ತು. ಶಿವಾಜಿ ಮೆರವಣಿಗೆಯಲ್ಲೂ ಮಸೀದಿಯಿಂದ ಕಲ್ಲು ಬೀಳುತ್ತೆ. ಕಲ್ಲು ಹೊಡೆದವರನ್ನ ಅರೆಸ್ಟ್ ಮಾಡೊದಿಲ್ಲ. ಅಕ್ರಮ ಮಸೀದಿ ಎಂದವರ ಮೇಲೆ ಕೇಸ್ ಹಾಕಿದ್ರಿ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ರೆ ಹೀಗೆ ಆಗಲ್ಲ ಎಂದಿದ್ದಾರೆ.
ಕಾಂಗ್ರೆಸ್ ಪೊಲೀಸರ ಮೇಲೆ ಹಿಡಿತ ಇಟ್ಟುಕೊಂಡಿದೆ. ಕಾಂಗ್ರೆಸ್ ತುಷ್ಟಿಕರಣದಿಂದ ಹೀಗೆ ಆಗುತ್ತಿದೆ. ತುಷ್ಟಿಕರಣ ನೀತಿಯಿಂದ ಇಂತಹ ಘಟನೆಗಳು ನಡೆಯುತ್ತವೆ. ಪೊಲೀಸ್ ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿರುವುದಕ್ಕೆ ಇಂತಹ ಘಟನೆ ಆಗುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.



