ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ: ಕಿಡಿಗೇಡಿಗಳ ಕೃತ್ಯಕ್ಕೆ ಕಿಟಕಿ ಗಾಜು ಪುಡಿಪುಡಿ

0
Spread the love

ಚಿಕ್ಕಮಗಳೂರು: ಹಿಂದೂ ಮನೆಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿರುವ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ.

Advertisement

ಮಹೇಶ್ ಎಂಬುವರ ಮನೆ ಮೇಲೆ ತಡರಾತ್ರಿ ಕಲ್ಲು ತೂರಲಾಗಿದೆ. ಕಲ್ಲು ತೂರಾಟ ನಡೆಸಿ, ಘೋಷಣೆ ಕೂಗಿ ಯುವಕರು ಪರಾರಿಯಾಗಿದ್ದಾರೆ. ಕಿಡಿಗೇಡಿಗಳ ಕೃತ್ಯದಿಂದ ಮನೆಯ ಕಿಟಕಿ ಗಾಜು ಪುಡಿಪುಡಿಯಾಗಿದ್ದು,

ಮನೆ ಮಾಲೀಕರು ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಸವನಹಳ್ಳಿ ಪೊಲೀಸರು ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here