HomeGadag Newsಮತ ಬ್ಯಾಂಕ್ ರಾಜಕಾರಣ ನಿಲ್ಲಲಿ

ಮತ ಬ್ಯಾಂಕ್ ರಾಜಕಾರಣ ನಿಲ್ಲಲಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರವು ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ ಶೇ.4 ಮೀಸಲಾತಿ ನೀಡುವ ವಿಧೇಯಕಕ್ಕೆ ಒಪ್ಪಿಗೆ ನೀಡದಂತೆ ಕೋರಿ ಗದಗ ಜಿಲ್ಲಾ ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಸಂವಿಧಾನ ರಚನೆಯಾಗುವಾಗಲೇ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಧರ್ಮಾಧಾರಿತ ಮೀಸಲಾತಿಯನ್ನು ವಿರೋಧಿಸಿದ್ದರು. ಅವರೇ ರಚಿಸಿದ ಸಂವಿಧಾನದ ಆರ್ಟಿಕಲ್ 15ರಲ್ಲಿ ರಾಜ್ಯ ಸರ್ಕಾರವು ನಿರ್ದಿಷ್ಟವಾಗಿ ಧರ್ಮ ಮತ್ತು ಜಾತಿ ಆಧಾರದ ಮೇಲೆ ನಾಗರಿಕರಲ್ಲಿ ತಾರತಮ್ಯ ಮಾಡುವುದನ್ನು ನಿಷೇಧಿಸುತ್ತದೆ. ವಿವಿಧ ರಾಜ್ಯಗಳಲ್ಲಿ ಧರ್ಮಾಧಾರಿತ ಮೀಸಲಾತಿಯನ್ನು ಬದಲಿಸಲು ಇದೇ ರೀತಿ ಪ್ರಯತ್ನಗಳು ನಡೆದಾಗ ನ್ಯಾಯಾಲಯಗಳು ತಿರಸ್ಕರಿಸಿವೆ. ಸುಪ್ರೀಂ ಕೋರ್ಟ್ ಕೂಡ ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ರದ್ದುಗೊಳಿಸಿದೆ. 77 ಸಮುದಾಯಗಳನ್ನು ಒಬಿಸಿ ಎಂದು ವರ್ಗೀಕರಿಸುವ ಪಶ್ಚಿಮ ಬಂಗಾಲದ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

ಹೀಗಿದ್ದರೂ ಕರ್ನಾಟಕ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿ ನೀಡುವ ಮೂಲಕ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಆಡಳಿತಾರೂಢ ಸರ್ಕಾರದ ವೋಟ್ ಬ್ಯಾಂಕ್ ಆಗಿರುವ ಸಮುದಾಯವನ್ನು ಸಮಾಧಾನಪಡಿಸಲು ಮೀಸಲಾತಿ ಒದಗಿಸುವ ಕಾರ್ಯವು ರಾಷ್ಟ್ರೀಯ ಸಮಗ್ರತೆ, ಏಕತೆ ಮತ್ತು ಸಾರ್ವಭೌಮತೆಗೆ ಅಪಾಯವನ್ನುಂಟುಮಾಡುತ್ತದೆ. ಈ ನಿಟ್ಟಿನಲ್ಲಿ ಈ ಮಸೂದೆಯನ್ನು ಅನುಮೋದಿಸದೆ ತಡೆಹಿಡಿಯಬೇಕೆಂದು ಪ್ರತಿಭಟನಾಕಾರರು ಮನವಿ ಪತ್ರದಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಶ್ರೀಧರ್ ಕುಲಕರ್ಣಿ, ಉಪಾಧ್ಯಕ್ಷರಾದ ರಾಣಿ ಆರ್.ಚಂದಾವರಿ, ಈರಣ್ಣ ಹೇಮಾದ್ರಿ, ಕಾರ್ಯದರ್ಶಿ ಸಂಜೀವ್ ಜೋಶಿ, ಕೋಶಾಧ್ಯಕ್ಷ ಮಾರುತಿ ಪವಾರ, ಗದಗ(ಗ್ರಾ) ಅಧ್ಯಕ್ಷರಾದ ವೀರೇಶ್ ಮಡಿವಾಳರ, ಗದಗ ನಗರ ಅಧ್ಯಕ್ಷ ಶ್ರೀನಿವಾಸ್ ಹುಬ್ಬಳ್ಳಿ, ಕಾರ್ತಿಕ್ ಪರ್ವತಗೌಡ, ಮಂಜುನಾಥ್ ಬಂಗಾರಿ, ವಿಜಯ ರೈಕರ್, ಸಂತೋಷ್ ಅಂಗಡಿ, ಪ್ರಸಾದ ಬಡಿಗೇರ್, ಅಶೋಕ ಜಕ್ಕಲಿ, ಸಂಜೀವ್ ರೆಡ್ಡಿ, ಕಪಿಲ್ ಜಿ, ಶ್ರೀಕಾಂತ ಕಂಬಳಿ, ವಿಜಯಕುಮಾರ್ ನಂದಿಕೋಲ್ಮಠ, ಪೃಥಾ ಪವಾರ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಪರಿಚಯಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಕೆಟಿಟಿಪಿ ಕಾಯ್ದೆಗೆ ಕರ್ನಾಟಕ ಸಚಿವ ಸಂಪುಟ ಕಳೆದ ವಾರ ತಿದ್ದುಪಡಿ ಮಾಡಿ ಅನುಮೋದನೆ ನೀಡಿದ್ದು, ಕೆಟಿಟಿಪಿ ಕಾಯ್ದೆಯಲ್ಲಿನ ತಿದ್ದುಪಡಿಯು ಸಿವಿಲ್ ವರ್ಕ್ ಗುತ್ತಿಗೆಗಳಲ್ಲಿ ಮತ್ತು ಸರಕು-ಸೇವಾ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿಯನ್ನು ಅನುಮತಿಸಲಿದೆ ಎಂದು ವಿ.ಹಿಂ.ಪ ಕಾರ್ಯಕರ್ತರು ಮನವಿಯಲ್ಲಿ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!