ಶಾಲೆಯಲ್ಲಿಯೇ ಸಾವನ್ನಪ್ಪಿದ ವಿದ್ಯಾರ್ಥಿ: ಶಿಕ್ಷಕರ ನಿರ್ಲಕ್ಷ್ಯವೇ ಕಾರಣ!?

0
Spread the love

ಯಾದಗಿರಿ:- ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ಓರ್ವ ಶಾಲೆಯಲ್ಲಿಯೇ ಸಾವನ್ನಪ್ಪಿದ ಘಟನೆ ಜರುಗಿದೆ. 16 ವರ್ಷದ ಚೇತನ್ ಮೃತ ದುರ್ದೈವಿ ಎನ್ನಲಾಗಿದೆ.

Advertisement

ಇಲ್ಲಿನ ಶಹಾಪುರ‌ದ ಡಿಡಿಯು ಖಾಸಗಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಚೇತನ್ ಓದುತ್ತಿದ್ದ. ಅನಾರೋಗ್ಯ ಹಿನ್ನಲೆ ಕಳೆದ ಎರಡು ದಿನಗಳ ಹಿಂದೆ ಪೋಷಕರು, ವಿದ್ಯಾರ್ಥಿಯನ್ನು ಶಾಲೆಯ ವಸತಿ ನಿಲಯದಿಂದ ಮನೆಗೆ ಕರೆದುಕೊಂಡು ಹೋಗಿದ್ದರು.

ಹೌದು, ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪೋಷಕರು ಚೇತನ್​ಗೆ ಚಿಕಿತ್ಸೆ ಕೊಡಿಸಿದ್ದರು. ಆದ್ರೆ, ಇವತ್ತು ಶಾಲೆಯಲ್ಲಿ ಕಿರು ಪರೀಕ್ಷೆ ಇದೆ ಎಂದು ಶಾಲೆಗೆ ಬಂದಿದ್ದ ವಿದ್ಯಾರ್ಥಿ. ಪರೀಕ್ಷೆ ಬರೆಯುವಾಗ ಸುಸ್ತಾಗಿ ವಾಂತಿ ಮಾಡಿಕೊಂಡಿದ್ದ. ಆದರೂ ಶಾಲೆಯಲ್ಲೇ ವಿಶ್ರಾಂತಿ ಪಡೆಯುವಂತೆ ಶಿಕ್ಷಕರು ಹೇಳಿದ್ದರು. ಇನ್ನು ಇದೆ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಚೇತನ್ ಸಹೋದರಿ ಪವಿತ್ರಾಗೆ ಕರೆದು, ನನಗೆ ಹುಷಾರಿಲ್ಲದ ವಿಷಯವನ್ನು ಕರೆ ಮಾಡಿ ಪೋಷಕರಿಗೆ ತಿಳಿಸು ಎಂದಿದ್ದಾನೆ.

ಆದರೆ, ಮುಖ್ಯ ಶಿಕ್ಷಕರ ಅನುಮತಿ ಇಲ್ಲದೆ ಫೋನ್ ಕೊಡಲ್ಲ ಎಂದು ಹೇಳಿ ಶಿಕ್ಷಕರು ನಿರ್ಲಕ್ಷ್ಯ ತೋರಿದ್ದಾರೆ. ಇತ್ತ ಚೇತನ್​ ನಿತ್ರಾಣಕ್ಕೆ ಬಂದು ಶಾಲೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಮೃತಪಟ್ಟ ಬಳಿಕ ಬೈಕ್ ಮೇಲೆ ಸಹ ವಿದ್ಯಾರ್ಥಿಗಳು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ‌. ಶಾಲೆಯ ಶಿಕ್ಷಕರ ನಿರ್ಲಕ್ಷ್ಯದಿಂದಲೇ ಚೇತನ್ ಸಾವಾಗಿದೆ ಎಂದು ಇದೀಗ ಪೋಷಕರು ಆರೋಪ ಮಾಡುತ್ತಿದ್ದು, ಈ ಕುರಿತು ಶಹಾಪುರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here