ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳು ಮಾದಕ ವಸ್ತುಗಳ ದಾಸರಾಗದೆ ಪುಸ್ತಕದ ದಾಸರಾಗಬೇಕು. ವಾತಾವರಣದಲ್ಲಿರುವ ದುಶ್ಚಟ ದಾಸರಿಂದ ಇಂದಿನ ಯುವಕರು ತಮ್ಮ ಜೀವನದಲ್ಲಿಯೂ ಕೂಡ ದುಶ್ಚಟಗಳನ್ನು ಅಳವಡಿಸಿಕೊಳ್ಳಲು ಮುಂದಾಗುತ್ತಿರುವುದು ವಿಪರ್ಯಾಸ. ಇಂತಹ ಪರಿಸ್ಥಿತಿಯಿಂದ ಹೊರ ಬಂದು ಓದುವ ಹವ್ಯಾಸವನ್ನೂ ರೂಢಿಸಿಕೊಳ್ಳುವುದು ಬಹುಮುಖ್ಯವಾಗಿದೆ. ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಮಾದಕ ವಸ್ತುಗಳಿಂದ ದೂರವಿದಷ್ಟು ಸಾಧನೆಗೆ ಅನುಕೂಲವಾಗುತ್ತದೆ ಎಂದು ಆಂಗ್ಲೋ ಉರ್ದು ಬಾಲಕರ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಇಸ್ಮಾಯಿಲ್ ಆರಿ ಹೇಳಿದರು.
ಶಹರದ ರೈಲ್ವೆ ಪೊಲೀಸ್ ಠಾಣೆಯಲ್ಲಿ ಆಂಗ್ಲೋ ಉರ್ದು ಬಾಲಕರ ಪ್ರೌಢಶಾಲೆಯ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಯಾವುದೇ ಮಾನಸಿಕ ಒತ್ತಡಕ್ಕೆ ಒಳಗಾಗದೆ ಏಗ್ರಾತೆಯಿಂದ ಒಳ್ಳೆಯ ಶಿಕ್ಷಣ ಪಡೆದುಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡುವ ಗುರಿಯನ್ನು ಹೊಂದಬೇಕು. ವಿದ್ಯಾರ್ಥಿ ಜೀವನದಲ್ಲಿ ಅನೇಕ ತೊಂದರೆ, ಅಡಚಣೆಗಳ ಬರುವುದು ಸಹಜ. ಆದರೆ, ಅವುಗಳತ್ತ ಚಿತ್ತಹರಿಸದೇ ಓದುವ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದರು.
ರೈಲ್ವೆ ಪಿಎಸ್ಐ ಬಿ.ಎನ್. ರಾಮಗೌಡ್ರ ಮಾತನಾಡಿ, ಮಾದಕ ವಸ್ತುಗಳ ಬಗ್ಗೆ, ರೈಲ್ವೆ ಹಳಿ ದಾಟುವ ಕುರಿತು ಜಾಗೃತಿ ಮೂಡಿಸಿದರು. ಎಎಸ್ಐ ಆರ್.ಎನ್. ಧೂಳಿ, ಎಎಸ್ಐ ರೇಣಕಪ್ಪ, ರೈಲ್ವೆ ಪೊಲೀಸ್ ಸಿಬ್ಬಂದಿಗಳಾದ ಸಂಜು, ರೇಷ್ಮಾ ಹಾದಿಮನಿ, ಆಂಗ್ಲೋ ಉರ್ದು ಬಾಲಕರ ಪ್ರೌಢಶಾಲೆಯ ದೈಹಿಕ ಶಿಕ್ಷಕ ಎಂ.ಜಿ. ಪಟೇಲ ಸೇರಿದಂತೆ ರೈಲ್ವೆ ಪೊಲೀಸ್ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.