ಗದಗ: ಸರಿಯಾದ ಸಮಯಕ್ಕೆ ಬಸ್ ಗಳಿಲ್ಲದೇ ತರಗತಿಗಳಿಂದ ವಿದ್ಯಾರ್ಥಿಗಳು ವಂಚಿತರಾಗ್ತಿದ್ದಾರೆ. ಗದಗ ತಾಲೂಕಿನ ಚಿಕ್ಕಹಂದಿಗೋಳ ಗ್ರಾಮದಲ್ಲಿ ಶಾಲಾ-ಕಾಲೇಜು ಸಮಯಕ್ಕೆ ಸರಿಯಾದ ಬಸ್ ಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ.
ಸಮಯಕ್ಕೆ ಸರಿಯಾಗಿ ಬಸ್ ಗಳು ಬಾರದೇ ಇರುವುದರಿಂದ ಖಾಸಗಿ ವಾಹನಗಳಿಗೆ ದುಡ್ಡು ಕೊಟ್ಟು ಪ್ರಯಾಣಿಸೋ ಪರಿಸ್ಥಿತಿ ನಿರ್ಮಾಣವಾಗಿದೆ.
ತಂದೆ ತಾಯಿ ದುಡಿದ ದುಡ್ಡನ್ನ ಕೊಟ್ಟು ಖಾಸಗಿ ವಾಹನಗಳಲ್ಲಿ ಓಡಾಡೋ ಪರಿಸ್ಥಿತಿ ಇದೆ ಅಂತಾ ವಿದ್ಯಾರ್ಥಿಗಳ ಅಳಲು ತೊಡಿಕೊಂಡಿದ್ದಾರೆ.
ಸೀಟ್ ಗಳು ಸಿಗದಿರೋ ಕಾರಣ ಬಸ್ಗಳ ಬಾಗಿಲಲ್ಲಿ ನಿಂತು ಸಂಚರಿಸೋ ಪರಿಸ್ಥಿತಿ ಇದ್ದು, ಏನಾದ್ರೂ ಹೆಚ್ಚು ಕಡಿಮೆ ಆದರೆ ಯಾರು ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಶಾಲಾ ಕಾಲೇಜು ಸಮಯಕ್ಕೆ ಬಸ್ ಬಿಡುವಂತೆ ಆಗ್ರಹಿಸಿದ್ದಾರೆ.



