ವಿಜಯಸಾಕ್ಷಿ ಸುದ್ದಿ, ಗದಗ: 2024-25ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಹಾಗೂ ರಾಘವೇಂದ್ರ ಹೈಟೆಕ್ ಪದವಿಪೂರ್ವ ಕಾಲೇಜು ಡಾವಣಗೆರೆ ಇವರ ಸಹಯೋಗದಲ್ಲಿ ಡಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಕರಾಟೆ ಸ್ಪರ್ಧೆಗಳಲ್ಲಿ ಇಲ್ಲಿನ ಸ್ಟುಡೆಂಟ್ ಎಜುಕೇಶನ್ ಸೊಸೈಟಿಯ ಸನ್ಮಾರ್ಗ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಹರ್ಷಿತಾ ಬಾಕಳೆ (-44 ಕೆ.ಜಿ) ದ್ವಿತೀಯ ಸ್ಥಾನ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಾಹಿಲ್ ವೆರ್ಣೇಕರ್ (-58 ಕೆ.ಜಿ) ತೃತೀಯ ಸ್ಥಾನ ಗಳಿಸಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಮಿಂಚಿದ ಈ ವಿದ್ಯಾರ್ಥಿಗಳಿಗೆ ಗದಗ ಜಿಲ್ಲಾ ಪದವಿಪೂರ್ವ ಉಪನಿರ್ದೇಶಕರಾದ ಸಿದ್ಧಲಿಂಗ ಬಂಡೂ ಮಸನಾಯಕ, ಸಂಸ್ಥೆಯ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ, ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ, ಆಡಳಿತಾಧಿಕಾರಿ ಎಂ.ಸಿ. ಹಿರೇಮಠ, ನಿರ್ದೇಶಕರಾದ ಪ್ರೊ. ರೋಹಿತ ಒಡೆಯರ, ರಾಹುಲ ಒಡೆಯರ, ಪ್ರೊ. ಪುನೀತ ದೇಶಪಾಂಡೆ, ಪ್ರೊ. ಸೈಯ್ಯದ್ ಮತಿನ್ ಮುಲ್ಲಾ ಸೇರಿದಂತೆ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.