ವಿಜ್ಞಾನ ವಸ್ತು ಪ್ರದರ್ಶನದಿಂದ ಮೌಢ್ಯತೆ ದೂರ

0
vastu pradarshana
Spread the love

ವಿಜಯಸಾಕ್ಷಿ ಸುದ್ದಿ, ಡಂಬಳ : ಶಾಲಾ ಹಂತದಲ್ಲಿಯೇ ವಿದ್ಯಾರ್ಥಿನಿಯರಲ್ಲಿ ಮೌಢ್ಯತೆ ಹೋಗಲಾಡಿಸಲು, ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸುವಲ್ಲಿ ವಿಜ್ಞಾನ ವಸ್ತು ಪ್ರದರ್ಶನಗಳು ಸಹಕಾರಿಯಾಗಲಿದೆ ಎಂದು ಮುಖ್ಯ ಶಿಕ್ಷಕಿ ಎಸ್.ಬಿ. ಅಬ್ಬಿಗೇರಿ ಹೇಳಿದರು.

ಡಂಬಳ ಗ್ರಾಮದ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಜ್ಞಾನ ಶಿಕ್ಷಕಿ ಬಿ.ವ್ಹಿ. ತುರಕಾಣಿ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು 45ಕ್ಕೂ ಹೆಚ್ಚು ಪ್ರಯೋಗಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಸಹಶಿಕ್ಷಕಿಯರಾದ ಯು.ಎಸ್. ಭಾವಿಕಟ್ಟಿ, ಎನ್.ಡಿ. ಶಿರೋಳಕರ, ಎಸ್.ಎ. ತಳವಾರ, ಎಫ್.ಎಸ್. ಡೋಣಿ, ಎಮ್.ಎಫ್. ಅಡೂರ, ಎಸ್.ಟಿ. ಕಳಸಣ್ಣವರ ಸೇರಿದಂತೆ ವಿದ್ಯಾರ್ಥಿನಿಯರು ಇದ್ದರು.


Spread the love

LEAVE A REPLY

Please enter your comment!
Please enter your name here