ಆನೇಕಲ್:- ತಮಿಳುನಾಡಿನ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ, 30 ಅಡಿ ಆಳದ ಬಾವಿಗೆ ಬಿದ್ದು ನರಳಾಡುತ್ತಿದ್ದ ಎರಡು ಕಾಡಾನೆಗಳನ್ನು ರಕ್ಷಣೆ ಮಾಡಿದೆ.
ತಮಿಳುನಾಡಿನ ಕುಂಡಲಂ ಗ್ರಾಮದ ಬಳಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಜವಳಗೆರೆ ಕಾಡಿನಿಂದ ಆಹಾರ ಹರಿಸಿ ರೈತರ ಜಮೀನುಗಳಿಗೆ ನುಗ್ಗಿದ್ದವು. ಸಂಜೆಯಾದರೂ ಕಾಡಿನತ್ತ ಮುಖ ಮಾಡದೇ ಅಲ್ಲಿಯೇ ಉಳಿದಿದ್ದ ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರೈತರು ಪಟಾಕಿ ಸಿಡಿಸಿದ್ದರಿಂದ ರೈತರ ತೋಟಗಳಿಗೆ ನುಗ್ಗಿದ್ದವು. ಈ ವೇಳೆ ಆಯಾತಪ್ಪಿ ಮರಿ ಆನೆ ಹಾಗೂ ಸಲಗ 30 ಅಡಿ ಆಳದ ಬಾವಿಗೆ ಬಿದ್ದಿದ್ದವು.
ಉಳಿದ ಕಾಡಾನೆಗಳು ಕಾಡಿನತ್ತ ಹೊರಟು ಹೋದರೆ ಮರಿ ಆನೆಗಾಗಿ ಬಾವಿ ಬಳಿಯೇ ತಾಯಿ ಆನೆ ರೋಧಿಸುತ್ತಾ ನಿಂತ್ತಿತ್ತು. ಕಾಡಾನೆಯ ರೋಧನೆಯನ್ನು ಕೇಳಿದ ಅರಣ್ಯ ಇಲಾಖೆ ಸಿಬ್ಬಂದಿ ಬಾವಿ ಬಳಿ ತೆರಳಿದ್ದು, ಬಾವಿಯಿಂದ ಹೊರಬರಲು ಹರಸಾಹಸಪಡುತ್ತಿರುವುದನ್ನು ಗಮನಿಸಿದ್ದಾರೆ. ಉಳಿದ ಕಾಡಾನೆಗಳು ಕಾಡಿನತ್ತ ಹೊರಟು ಹೋದರೆ ಮರಿ ಆನೆಗಾಗಿ ಬಾವಿ ಬಳಿಯೇ ತಾಯಿ ಆನೆ ರೋಧಿಸುತ್ತಾ ನಿಂತ್ತಿತ್ತು. ಕಾಡಾನೆಯ ರೋಧನೆಯನ್ನು ಕೇಳಿದ ಅರಣ್ಯ ಇಲಾಖೆ, ಕೂಡಲೇ ಎರಡು ಜೆಸಿಬಿಗಳ ಮೂಲಕ ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿದ್ದು, ಕಾಡಾನೆಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ.