ರಾಮನಗರ:- ಕನಕಪುರ ತಾಲೂಕಿನ ಮಹರಾಜಕಟ್ಟೆ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿಯೋರ್ವರ ಅಮಾನವೀಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
Advertisement
ಮಗು ಹಠ ಮಾಡುತ್ತಿದೆ ಎಂದು ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿದ್ದಾರೆ. ರಮೇಶ್ ಹಾಗೂ ಚೈತ್ರಾ ದಂಪತಿಯ ಎರಡೂವರೆ ವರ್ಷದ ಮಗು ಮೇಲೆ ಅಂಗನವಾಡಿ ಸಹಾಯಕಿ ಹಲ್ಲೆ ಮಾಡಿದ್ದರು. ಅಂಗನವಾಡಿಯಲ್ಲಿ ಮಗು ಹಠ ಮಾಡ್ತಿದೆ ಎಂದು ಕೈ ಮೇಲೆ ಬರೆ ಹಾಕಿ ಬಳಿಕ ಡೈಪರ್ ಒಳಗೆ ಚಂದ್ರಮ್ಮ ಖಾರದಪುಡಿ ಹಾಕಿದ್ದರು.
ಅಂಗನವಾಡಿಯಿಂದ ಮಗು ಕರೆತರಲು ಹೋದಾಗ ಪೋಷಕರಿಗೆ ಹಲ್ಲೆಯ ವಿಚಾರ ತಿಳಿದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಅಂಗನವಾಡಿ ಸಹಾಯಕಿ ಚಂದ್ರಮ್ಮ ವಿರುದ್ಧ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.